i
ಫೆ. 20 ರಂದು ಅಸಂಘಟಿತ ಕಾರ್ಮಿಕರ ರಾಜ್ಯ ಸಮಾವೇಶ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ರಾಜ್ಯ ಅಸಂಘಟಿತ ಕಾರ್ಮಿಕ ಸಂಘದ ರಾಜ್ಯ ಮಟ್ಟದ ಪದಾಧಿಕಾರಿಗಳ ಸಮಾವೇಶವನ್ನು ಫೆ. ೨೦ರಂದು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಂಘದ ರಾಜ್ಯಾಧ್ಯಕ್ಷ ಕುಪೇಂದ್ರ ಆಯನೂರು, ಸಮಾವೇಶವನ್ನು ಅಂದು ಬೆಳಗ್ಗೆ ೧೦:೩೦ಕ್ಕೆ ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸುವರು. ಎಂಎಲ್ಸಿ ಡಿ ಎಸ್ ಅರುಣ್ ಕ್ಯಾಲೆಂಡರ್ ಬಿಡುಗಡೆ ಮಾಡುವರು. ಅತಿಥಿಗಳಾಗಿ ಓಂ ಗಣೇಶ್ ಟ್ರ್ಯಾಕ್ಟರ್ ಶೋರೂಮ್ನ ಮಾಲಕ ಹರ್ಷ ಕಾಮತ್, ಸರ್ಜಿ ಆಸ್ಪತ್ರೆಗಳ ಸಮೂಹದ ವ್ಯವಸ್ಥಾಪಕ ನಿರ್ದೆಶಕ ಡಾ.ಧನಂಜಯ ಸರ್ಜಿ, ಸಾಗರ ನಗರಸಭಾ ಸದಸ್ಯ ಟಿ.ಡಿ. ಮೇಘರಾಜ್, ಮಾಜಿ ಶಾಸಕ ಅಶೋಕ್ ನಾಯ್ಕ, ಉದ್ಯಮಿ ಎಸ್.ಎಸ್. ಜ್ಯೋತಿ ಪ್ರಕಾಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಮಾ ದೇವರಾಜ್ ಆಗಮಿಸುವರೆಂದರು.
ಮುಖ್ಯ ಭಾಷಣಕಾರರಾಗಿ ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಶಿವಕುಮಾರ್ ಆಗಮಿಸುವರು. ಅಧ್ಯಕ್ಷತೆಯನ್ನು ಸಂಘದ ರಾಜ್ಯಾಧ್ಯಕ್ಷ ಕುಪೇಂದ್ರ ಆಯನೂರು ವಹಿಸುವರು ಎಂದು ಮಾಹಿತಿ ನೀಡಿದರು.
ಅಂದು ಸಂಜೆ ೪ ಗಂಟೆಗೆ ನಡೆಯುವ ಸಮಾರೋಪದಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ಗೌರವ ಅಧ್ಯಕ್ಷ ಆಯನೂರು ಮಂಜುನಾಥ್ ಪಾಲ್ಗೊಳ್ಳುವರು ಎಂದು ವಿವರಿಸಿದರು. ಸಮಾವೇಶದಲ್ಲಿ ಅಸಂಘಟಿತ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ, ಅದಕ್ಕೆ ಪರಿಹಾರ, ಕಾರ್ಮಿಕರಿಗೆ ಸಿಗುವ ಸೌಲಭ್ಯ, ಕಾರ್ಮಿಕರ ನೊಂದಣಿ, ಕಾರ್ಡು ವಿತರಣೆ, ವಿಮೆ, ಮೊದಲಾದವುಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಹೊನ್ನಪ್ಪ, ಮೇಘಾ ಮೋಹನ ಜೆಟ್ಟಿ, ಜಿಲ್ಲಾಧ್ಯಕ್ಷೆ ಸುರೇಖಾ ಫಾಲಾಕ್ಷಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಚಾಮುಂಡಿಪುರ, ನಗರ ಅಧ್ಯಕ್ಷ ಚಂದ್ರಶೇಖರ್ ಮೊದಲಾದವರಿದ್ದರು.