i
ಶ್ರೀಲಕ್ಷ್ಮೀನರಸಿಂಹ ಸ್ವಾಮಿ ರಥೋತ್ಸವ ಪ್ರಯುಕ್ತ ರೈಲುಗಳ ತಾತ್ಕಾಲಿಕ ನಿಲುಗಡೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು/ಹುಬ್ಬಳ್ಳಿ:
ಮುಂಬರುವ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ಪ್ರಯುಕ್ತ ರೈಲು ಸಂಖ್ಯೆ 16206/16205 ಮೈಸೂರು-ತಾಳಗುಪ್ಪ-ಮೈಸೂರು ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲುಗಳನ್ನು ಫೆಬ್ರವರಿ–21 ರಿಂದ 28, 2024 ರವರೆಗೆ ಅಕ್ಕಿಹೆಬ್ಬಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆ ಒದಗಿಸಲು ನಿಗದಿಪಡಿಸಲಾಗಿದೆ. ಈ ತಾತ್ಕಾಲಿಕ ನಿಲುಗಡೆಯು ರಥೋತ್ಸವದಲ್ಲಿ ಭಾಗವಹಿಸುವ ಭಕ್ತರ ಅನುಕೂಲವನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಅಕ್ಕಿಹೆಬ್ಬಾಳು ನಿಲ್ದಾಣದಲ್ಲಿ ರೈಲುಗಳ ಆಗಮನ / ನಿರ್ಗಮನದ ವಿವರಗಳು ಈ ಕೆಳಗಿನಂತಿವೆ.
1. ರೈಲು ಸಂಖ್ಯೆ 16206 ಮೈಸೂರು-ತಾಳಗುಪ್ಪ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಅಕ್ಕಿಹೆಬ್ಬಾಳು ನಿಲ್ದಾಣಕ್ಕೆ ಬೆಳಿಗ್ಗೆ 06:55 ಗಂಟೆಗೆ ಆಗಮಿಸಿ, 06.56 ಗಂಟೆಗೆ ಹೊರಡಲಿದೆ.
2. ರೈಲು ಸಂಖ್ಯೆ 16205 ತಾಳಗುಪ್ಪ-ಮೈಸೂರು ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಅಕ್ಕಿಹೆಬ್ಬಾಳು ನಿಲ್ದಾಣಕ್ಕೆ ರಾತ್ರಿ 08:44 ಗಂಟೆಗೆ ಆಗಮಿಸಿ, 08:45 ಗಂಟೆಗೆ ಹೊರಡಲಿದೆ ಎಂದು ಹುಬ್ಬಳ್ಳಿ ನೈಋತ್ಯ ರೈಲ್ವೆದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ್ ಕನಮಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.