i
ಜಿಲ್ಲಾ ರೈತ ಸಂಘದ ನೂತನ ಅಧ್ಯಕ್ಷರಾಗಿ ರಾಘವೇಂದ್ರ ಆಯ್ಕೆ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ರೈತ ಸಂಘದ ಕಛೇರಿಯಲ್ಲಿ ರಾಜ್ಯ ಉಪಾಧ್ಯಕ್ಷ ಟಿ.ಎಂ ಚಂದ್ರಪ್ಪನವರ ಅಧ್ಯಕ್ಷತೆಯಲ್ಲಿ ಮತ್ತು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್ ಬಸವರಾಜಪ್ಪ ಉಪಸ್ಥಿತಿಯಲ್ಲಿ ಶಿವಮೊಗ್ಗ ರೈತ ಸಂಘದ ಜಿಲ್ಲಾ ಸಮಿತಿ ಸಭೆಯನ್ನು ನಡೆಸಲಾಯಿತು.
ಈ ಸಭೆಯಲ್ಲಿ ಜಿಲ್ಲಾಧ್ಯಕ್ಷರನ್ನಾಗಿ ಕೆ. ರಾಘವೇಂದ್ರರವರನ್ನು ಜಿಲ್ಲಾ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ಈ ಸಂಧರ್ಭದಲ್ಲಿ ರಾಜ್ಯಾ ಉಪಾಧ್ಯಕ್ಷರಾದ ಹಿಟ್ಟೂರು ರಾಜು, ಟಿ.ಎಂ ಚಂದ್ರಪ್ಪ,
ಜಿಲ್ಲಾ ಗೌರವಾಧ್ಯಕ್ಷರಾದ ಈಶಣ್ಣ, ಜಿಲ್ಲಾಧ್ಯಕ್ಷರಾದ ಕೆ.ರಾಘವೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ ಜಗದೀಶ್, ಜಿಲ್ಲಾ ಕಾರ್ಯಾಧ್ಯಕ್ಷರಾದ ಪಿ.ಡಿ ಮಂಜಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಪಿ.ಶೇಖರಪ್ಪ, ಎಂ.ಮಂಜಪ್ಪ, ಡಿ.ಎಸ್ ಜಯಣ್ಣ, ನಂಜುಂಡಪ್ಪ, ಜಿಲ್ಲಾ ಕಾರ್ಯದರ್ಶಿ ಹೆಚ್.ಈ ಗುರುಶಾಂತಪ್ಪ,
ಜಿಲ್ಲಾ ಹಸಿರುಸೇನೆ ಸಂಚಾಲಕರಾದ ಎಂ.ಡಿ ನಾಗರಾಜ್, ಗ್ರಾಮಾಂತರ ಅಧ್ಯಕ್ಷರಾದ ಕಸಟ್ಟಿ ರುದ್ರೇಶ್ ಹಾಗೂ ಜಿಲ್ಲೆ ಮತ್ತು ತಾಲ್ಲೂಕು ಎಲ್ಲಾ ಪದಾಧಿಕಾರಿಗಳು ರೈತರು ಹಾಜರಿದ್ದರು.