i
ರಸ್ತೆ ಅಪಘಾತ ಶಾಸಕಿ ಲಾಸ್ಯ ನಂದಿತಾ ಸಾವು…
ಚಂದ್ರವಳ್ಳಿ ನ್ಯೂಸ್, ಹೈದ್ರಾಬಾದ್:
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತೆಲಂಗಾಣದ ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಪಕ್ಷದ ಶಾಸಕಿ ಲಾಸ್ಯ ನಂದಿತಾ ಮೃತಪಟ್ಟಿದ್ದಾರೆ. ಹೈದರಾಬಾದ್ ಸಮೀಪದ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟ್ಟಂಚೆರು ಹೊರವಲಯದ ರಸ್ತೆಯಲ್ಲಿ ಇಂದು (ಫೆ.23) ಮುಂಜಾನೆ ಅಪಘಾತ ಸಂಭವಿಸಿದೆ.
ಕೇವಲ 37 ವರ್ಷದ ಲಾಸ್ಯ ನಂದಿತಾ ಇದೇ ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗುವ ಮೂಲಕ ತೆಲಂಗಾಣ ವಿಧಾನಸಭೆ ಪ್ರವೇಶಿಸಿದ್ದರು.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಂದಿತಾ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಬದುಕುಳಿದಿಲ್ಲ. ಘಟನೆಯಲ್ಲಿ ನಂದಿತಾ ಅವರ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.