i
ಎಸ್ಎಸ್ಎಲ್ಸಿ ಪರಿಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಗಳನ್ನು ಒದಗಿಸುವ ಬಗ್ಗೆ ಸ್ಪಷ್ಠೀಕರಣ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಫೆಬ್ರವರಿ 26ರಿಂದ ಮಾರ್ಚ್ 02ರ ವರೆಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪೂರ್ವ ಸಿದ್ದತಾ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕೆ ಮತ್ತು ಮೌಲ್ಯನರ್ಣಯ ಮಂಡಳಿ ವತಿಯಿಂದ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸದರಿ ಪರೀಕ್ಷೆಗೆ ಅಗತ್ಯವಿರುವ ಪ್ರಶ್ನೆಪತ್ರಿಕೆಗಳನ್ನು ಮಾತ್ರ ಮುದ್ರಿಸಿ ಶಲಾ ಹಂತಕ್ಕೆ ತಲುಪಿಸಲು ಪ್ರತಿ ವಿದ್ಯಾರ್ಥಿಯಿಂದ ರೂ. 50/- ಗಳನ್ನು ಸಂಗ್ರಹಿಸಲು, ಸರ್ಕಾರದ ಅನುಮೋದನೆ ಪಡೆಯಲಾಗಿದೆ. ಅದರಂತೆ ಮಂಡಳಿ ಹಂತದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಜಿಲ್ಲಾ ಉಪನಿರ್ದೇಶಕರಿಗೆ ಸಾಪ್ಟ್ ಪ್ರತಿಯನ್ನು ಒದಗಿಸಲಾಗಿದ್ದು, ಪ್ರಶ್ನೆ ಪತ್ರಿಕೆಗಳನ್ನು ಮಾತ್ರ ಮುದ್ರಿಸಿ, ಎಲ್ಲಾ ಪ್ರೌಢಶಾಲೆಗಳಿಗೆ ಸುರಕ್ಷಿತವಾಗಿ ತಲುಪಿಸಲು ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿರುತ್ತದೆ.
ಪೂರ್ವ ಸಿದ್ದತಾ ಪರೀಕ್ಷೆಯನ್ನು ಶಾಲಾ ಹಂತದಲ್ಲಿ ನಡೆಸಲಾಗುತ್ತಿದ್ದು, ಅದರಂತೆ ಶಾಲಾ ಹಂತದಲ್ಲಿ ನಡೆಸಲಾಗುವ ಕಿರು ಪರೀಕ್ಷೆಗಳು ಮತ್ತು ಮಧ್ಯ ವಾರ್ಷಿಕ ಪರೀಕ್ಷೆಗೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆಯನ್ನು ತರುವುದು ಈ ಹಿಂದಿನಿಂದಲೂ ಚಾಲ್ತಿಯಲ್ಲಿರುತ್ತದೆ. ಅದೇ ರೀತಿ ಈ ಹಿಂದಿನ ವರ್ಷದಲ್ಲಿ ನಡೆಸಲಾದ ಪೂರ್ವ ಸಿದ್ದತಾ ಪರೀಕ್ಷೆಗೂ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆಯನ್ನು ತೆಗೆದುಕೊಂಡು ಬಂದು ಉತ್ತರ ಬರೆದಿರುತ್ತಾರೆ ಎಂದು ಈ ಮೂಲಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷರು ಸ್ಪಷ್ಟೀಕರಿಸಿದ್ದಾರೆ.