i
ಅದ್ಧೂರಿಯಾಗಿ ನಡೆದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಶ್ರೀ ಬೃಹನ್ಮಠ ಪ್ರೌಢ ಶಾಲಾ 1995-98 ನೇ ಸಾಲಿನ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ನಡೆಯಿತು.
ನಗರದ ಬಿಗ್ ಬಾಸ್ ಹೋಟೆಲ್ ಸಭಾಂಗಣದಲ್ಲಿ 1995-98 ನೇ ಸಾಲಿನ ವಿದ್ಯಾರ್ಥಿಗಳು ಭಾನುವಾರ ಆಯೋಜನೆ ಮಾಡಿದ್ದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ಬೃಹನ್ಮಠ ಸಂಯುಕ್ತ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಮುರುಗೇಂದ್ರಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಾಲೆಯ ನಿವೃತ್ತ ಶಿಕ್ಷಕರಾದ ಡಿ ಬಸವರಾಜಪ್ಪ, ಬಸವರಾಜ ಎಸ್ ಗಡ್ದೆಪ್ಪನವರ, ಸಿ ಎಂ ಸಾವಿತ್ರಿ, ಪ್ರಸಿದ್ಧ ಗಂಗಮ್ಮ, ಶಾಲೆಯ ಹಳೆಯ ವಿದ್ಯಾರ್ಥಿಗಳಾದ ಉಮೇಶ್ ನಾಯ್ಕ್, ಮೋಹನ್, ಮಾರುತಿ ಮತ್ತಿತರರು ಭಾಗವಹಿಸಿದ್ದರು.
ವಿಶ್ರಾಂತ ಪ್ರಾಂಶುಪಾಲ ಎಂ ಸಿ ಮುರುಗೇಂದ್ರಯ್ಯ ತಮ್ಮ ಅಧ್ಯಕ್ಷರ ನುಡಿಯಲ್ಲಿ ಈ ರೀತಿಯ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮಗಳಿಂದ ಸಮಾಜದಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚುತ್ತದೆ. ಅದಕ್ಕಿಂತ ಮುಖ್ಯವಾಗಿ ಹಳೆಯ ಸ್ನೇಹಿತರೆಲ್ಲ ಒಂದು ಕಡೆ ಸೇರಿ ಬಾಲ್ಯದ ಜೀವನ, ವಿದ್ಯಾರ್ಥಿಗಳ ಜೀವನದಲ್ಲಿ ಅನುಭವಿಸಿದ ರಸ ನಿಮಿಷಗಳ ಅನುಭವ, ಸುಃಖ ದುಃಖ ಸಂತೋಷದ ವಿಷಯಗಳನ್ನು ವಿನಿಮ ಮಾಡಿಕೊಳ್ಳುವ ಮೂಲಕ ಮತ್ತೊಮ್ಮೆ ವಿದ್ಯಾರ್ಥಿ ಜೀವನಕ್ಕೆ ಕಾಲಿಟ್ಟಂತೆ ಆಗುವ ಅನುಭವವನ್ನು ಮರೆಯಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.
ಬಾಲ್ಯದಲ್ಲಿನ ತುಂಟಾಟಗಳಿಂದ ಪ್ರೌಢಾವಸ್ಥೆ ತಲುಪಿ ನಂತರ ದೇಶದ ಪ್ರಗತಿಯಲ್ಲಿ ಮಹತ್ವದ ಪಾತ್ರವನ್ನು ಒಂದೊಂದು ರೀತಿಯಾಗಿ ಒಬ್ಬೊಬ್ಬರು ನಿರ್ವಹಿಸುತ್ತಿರುವುದು ಹೆಮ್ಮೆ ತರುವ ವಿಚಾರ ಎಂದು ಅಭಿಪ್ರಾಯಪಟ್ಟರು.