i
ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯಸಭೆ ಚುನಾವಣೆಯ ನಂತರ ಡಾ.ಸೈಯದ್ ನಾಸಿರ್ ಹುಸೇನ್ ಬೆಂಬಲಿಗರು ಕರ್ನಾಟಕ ರಾಜ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿದವರನ್ನು ಬಂಧಿಸಿವುತಂ ಬಿಜೆಪಿ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟಿಸುತ್ತಿರುವ ಸಂದರ್ಭದಲ್ಲೇ ಎಚ್ಚೆತ್ತ ಕಾಂಗ್ರೆಸ್ ಪಕ್ಷದ ಮುಖಂಡರು ಬಿಜೆಪಿ ವಿರುದ್ದ ಘೋಷಣೆಗಳನ್ನು ಕೂಗುವುದರ ಮೂಲಕ ಬಿಜೆಪಿಯ ವಿರುದ್ದ ಪ್ರತಿಭಟನೆ ನಡೆಸಿತು.ಕಾಂಗ್ರೆಸ್ ಕಾರ್ಯಕರ್ತರು ಕೂಡಾ ಭಾರತ್ ಮಾತಾ ಕೀ ಜೈ, ಕೋಮುವಾದಿ ಬಿಜೆಪಿಗೆ ಧಿಕ್ಕಾರ, ಮನುವಾದಿ ಬಿಜೆಪಿ ಪಕ್ಷಕ್ಕೆ ಧಿಕ್ಕಾರ, ಸಂವಿಧಾನ ವಿರೋಧಿ ಬಿಜೆಪಿಗೆ ಧಿಕ್ಕಾರ, ದಲಿತ ವಿರೋಧಿ ಬಿಜೆಪಿಗೆ ಧಿಕ್ಕಾರ ಎಂದು ಕೂಗಿದರು.
ಗಾಂಧೀಜಿಯವರನ್ನು ಕೊಂದ ಗೂಡ್ಸ್ ವಂಶದವರು, ಭಯೋತ್ಸಾದಕರನ್ನು ಕಂದಹಾರನಲ್ಲಿ ಬಿಡುಗಡೆ ಮಾಡಿದವರು ಬಿಜೆಪಿಯವರು, ಪಾಕಿಸ್ತಾನದ ಪ್ರಧಾನ ಮಂತ್ರಿ ನಿವಾಸಕ್ಕೆ ಹೋಗಿ ಆಹಾರ ಸೇವನೆ ಮಾಡಿದವರು ಬಿಜೆಪಿಯವರು ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ಮಾಡಿದರು.ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಹಾಲಸ್ವಾಮಿ, ಜಿಪಂ ಮಾಜಿ ಸದಸ್ಯ ಪ್ರಕಾಶ್ ಮೂರ್ತಿ, ನಗರ ಘಟಕದ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮೀಕಾಂತ್, ನೇತಾಜಿ ತಿಪ್ಪೇಸ್ವಾಮಿ, ಎನ್.ಡಿ.ಕುಮಾರ್, ಮುದಸಿರ್ ಸೇರಿದಂತೆ ಇತರರು ಭಾಗವಹಿಸಿದ್ದರು.