i
ನಿವೃತ್ತ ಐಎಎಸ್ ಅಧಿಕಾರಿ ಶಿವರಾಮುಗೆ ಹೃದಯಾಘಾತ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ‘ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿದೆ. ಸದ್ಯಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನಗರದ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.