i
ದೇಶ ದ್ರೋಹಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ಘೋಷಣೆ ಕೂಗಿದವನನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಬಳಿ ಇರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರಲ್ಲದೆ ದೇಶ ದ್ರೋಹಿ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ, ಪಾಕಿಸ್ತಾನಿಗಳಿಗೆ, ಭಯೋತ್ಪಾದಕರ ಬೆನ್ನಿಗೆ ನಿಂತಿರುವ ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭ ಫೊಲೀಸರು ಬಿಜೆಪಿ ಕಾರ್ಯಕರ್ತರ ಮಧ್ಯ ನೂಕಾಟ, ತಳ್ಳಾಟ ಉಂಟಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಭಾರ್ಗವಿ ದ್ರಾಮಿಡ್ ಅವರಿಗೆ ಸಾಕಷ್ಟು ನೋವು ಬಿದ್ದು ಆಸ್ಪತ್ರೆಗೆ ಸೇರಿದ ಘಟನೆ ಕೂಡ ಜರುಗಿತು.
ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬೆಂಬಲಿಸುವ ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ ಬಿಜೆಪಿ ಕಾರ್ಯಕರ್ತರು, ಪೊಲೀಸ್ ಗೂಂಡಾ ರಾಜ್ಯಕ್ಕೆ ಧಿಕ್ಕಾರಗಳನ್ನು ಕೂಗಿದರು.
ರಾಜ್ಯಸಭೆ ಚುನಾವಣೆ ಫಲಿತಾಂಶದ ಬಳಿಕ ನಾಸಿರ್ ಹುಸೇನ್ ಬೆಂಬಲಿಗರು, ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ದೇಶ ವಿರೋಧಿ ಘೋಷಣೆ ಕೂಗಿದವನನ್ನು ಬಂಧಿಸಬೇಕು, ಅಲ್ಲದೆ ಮಾಧ್ಯಮಗಳ ಮೇಲೆ ಹರಿಹಾಯ್ದಿರುವ ನಾಸಿರ್ ಹುಸೇನ್ ಅವರ ವರ್ತನೆಗೆ ಕಿಡಿ ಕಾರಿದ ಜಿಲ್ಲಾಧಿಕಾರಿಗಳ ವೃತ್ತದಲ್ಲಿ ಪ್ರತಿಭಟನೆ ತೀವ್ರಗೊಳಿಸಿದರು.
ಕಾಂಗ್ರೆಸ್ ಪಕ್ಷದವರು ಪಾಕಿಸ್ತಾನಕ್ಕೆ ಜಿಂದಾಬಾದ್ ಘೋಷಣೆ ಕೂಗುತ್ತಿರುವುದು ಅತ್ಯಂತ ಖಂಡನೀಯ, ಕಾಂಗ್ರೆಸ್ ಪಕ್ಷದಿಂದ ದೇಶ ರಕ್ಷಣೆ ಅಸಾಧ್ಯವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಆಡಳಿತ ಸಿಕ್ಕರೆ ಭಯೋತ್ಪಾದಕರು ದೇಶದ ತುಂಬೆಲ್ಲಾ ಭಯೋತ್ಪಾದನಾ ಕೃತ್ಯಗಳನ್ನು ಎಸಗುವುದರ ಜೊತೆಯಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗುತ್ತಾರೆ, ಹಿಂದೂ ದೇಶ ಹೋಗಿ ಪಾಕಿಸ್ತಾನಿಗಳ ದೇಶ ಆಗಲಿದೆ ಎಂದು ಆತಂಕ ವ್ಯಕ್ತ ಪಡಿಸಿ ಕಾಂಗ್ರೆಸ್ ಕಪಿಮುಷ್ಠಿಯಿಂದ ದೇಶ ರಕ್ಷಣೆ ಮಾಡಬೇಕಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ಘೋಷಣೆ ಕೂಗಿದವನನ್ನು ಬಂಧಿಸುವ ಬದಲು ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಪರಿಶೀಲಿಸಿ, ವರದಿ ಬಳಿಕ ಮುಂದಿನ ಕ್ರಮ ಎಂದು ಹೇಳುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು ಇವರಿಗೆ ಕಣ್ಣು ಕಾಣಿಸದಿಲ್ಲವೆ, ಕಿವಿ ಕೇಳಿಸುವುದಿಲ್ಲವೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ:
ಪ್ರತಿಭಟನೆ ಬಳಿಕ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ಕಾಂಗ್ರೆಸ್ ಕಚೇರಿ ಸುತ್ತ ಬ್ಯಾರಿಕೇಡ್ ನಿರ್ಮಾಣ ಮಾಡಿದ್ದರೂ ಬ್ಯಾರಿಕೇಡ್ ದಾಟಿ ಮುನ್ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು.
ಬಿಜೆಪಿ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರಾದ ಭಾರ್ಗವಿ ದ್ರಾವಿಡ್, ನರೇಂದ್ರ ಹೊನ್ನಾಳ್, ಶೈಲಜಾರೆಡ್ಡಿ, ದಗ್ಗೆ ಶಿವಪ್ರಕಾಶ್, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಾಮು, ವೀಣಾ, ಕಿರಣ್ ಕುಮಾರ್, ಪರಶುರಾಂ, ಶೀಲಾ, ಅನ್ನಪೂರ್ಣಮ್ಮ, ಶಂಭು, ಛಲವಾದಿ ತಿಪ್ಪೇಸ್ವಾಮಿ, ನವೀನ್, ಪವನಾ, ಪಲ್ಲವಿ ಪ್ರಸನ್ನ, ರವಿ ಪೈಲೆಟ್, ಪ್ರಭು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.