i
ರಾಜ್ಯಸಭೆಗೆ ಸುಧಾ ಮೂರ್ತಿ ನಾಮಕರಣ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇನ್ಫೋಸಿಸ್ ಸುಧಾಮೂರ್ತಿ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿ ಅಂತರರಾಷ್ಟ್ರೀಯ ಮಹಿಳಾ ದಿನದಂದೇ ನಾಮಕರಣ ಮಾಡಿ ರಾಷ್ಟ್ರಪತಿ ಆದೇಶ ಹೊರಡಿಸಿದ್ದಾರೆ.
ನಾನು ಎಂದಿಗೂ ರಾಜ್ಯಸಭೆ ಸ್ಥಾನವನ್ನು ಬಯಸಿರಲಿಲ್ಲ. ಕೇಂದ್ರ ಸರ್ಕಾರವು ನನ್ನನ್ನು ನಾಮನಿರ್ದೇಶನ ಮಾಡಲು ಏಕೆ ಆಯ್ಕೆ ಮಾಡಿತು ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ‘ ಅವರು ತಿಳಿಸಿದ್ದಾರೆ.
ಮಹಿಳಾ ದಿನದಂದು ರಾಜ್ಯಸಭೆಗೆ- ನಾಮನಿರ್ದೇಶನಗೊಂಡಿರುವುದು ಆಶ್ಚರ್ಯವನ್ನುಂಟು ಮಾಡಿದೆ. ಇದರಿಂದ ನನಗೆ ತುಂಬಾ ಸಂತೋಷವಾಗಿದೆ. ನಾನು ಪ್ರಧಾನಿ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ ಎಂದು ಪ್ರಸ್ತುತ ಥಾಯ್ಲೆಂಡ್ ಪ್ರವಾಸದಲ್ಲಿರುವ ಸುಧಾ ಮೂರ್ತಿ ಅವರು ದೂರವಾಣಿ ಮೂಲಕ ‘ಪಿಟಿಐ‘ಗೆ ತಿಳಿಸಿದ್ದಾರೆ.
‘ನನಗಿದು ಹೊಸ ಜವಾಬ್ದಾರಿ- ಅಲ್ಲಿ ನಾನೇನು ಮಾಡಬಲ್ಲೆ ಎಂಬುದನ್ನು ಅವಲಕೋಕಿಸಬೇಕಿದೆ. ಅಲ್ಲಿನ ಕೆಲಸ ಕಾರ್ಯಗಳ ಕುರಿತು ನಾನು ಮೊದಲು ಅಧ್ಯಯನ ನಡೆಸಬೇಕು. ನಂತರವಷ್ಟೇ ನಾನೇನು ಮಾಡಬಲ್ಲೆ ಎಂಬದು ಸ್ಪಷ್ಟವಾಗಲಿದೆ‘ ಎಂದು ಸುಧಾ ಮೂರ್ತಿ ಹೇಳಿದ್ದಾರೆ.