i
ಹಿಂದೂ ರುದ್ರಭೂಮಿಯಲ್ಲಿ ವಿಜೃಂಭಣೆಯಿಂದ ನಡೆದ ಮಹಾಶಿವರಾತ್ರಿ ಮಹೋತ್ಸವ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜೋಗಿಮಟ್ಟಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಮೂರನೆ ವರ್ಷದ ಮಹಾಶಿವರಾತ್ರಿ ಮಹೋತ್ಸವ ಹಾಗೂ ೩೧ ಅಡಿ ಎತ್ತರದ ಧ್ಯಾನ ಮಗ್ನ ಶಿವನ ಪ್ರತಿಮೆ ಲೋಕಾರ್ಪಣೆಗೊಂಡ ಪ್ರಯುಕ್ತ ಮುಕ್ತಿನಾಥೇಶ್ವರಸ್ವಾಮಿ ದೇವಸ್ಥಾನ ಸಮಿತಿ ಮತ್ತು ಸಾರ್ವಜನಿಕ ಹಿಂದೂ ರುದ್ರಭೂಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಶನಿವಾರ ಮುಕ್ತಿನಾಥೇಶ್ವರಸ್ವಾಮಿ ದೇವಸ್ಥಾನದ ಸಮೀಪ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ನೂರಾರು ಭಕ್ತರು ಅನ್ನಸಂತರ್ಪಣೆಯಲ್ಲಿ ಪ್ರಸಾದ ಸವಿದರು.
ಮುಕ್ತಿನಾಥೇಶ್ವರಸ್ವಾಮಿ ದೇವಸ್ಥಾನ ಸಮಿತಿ ಮತ್ತು ಸಾರ್ವಜನಿಕ ಹಿಂದೂ ರುದ್ರಭೂಮಿ ಸೇವಾ ಸಮಿತಿ ಟ್ರಸ್ಟ್ ಗೌರವಾಧ್ಯಕ್ಷ ಎಸ್.ಗುರುಮೂರ್ತಿ, ಅಧ್ಯಕ್ಷ ಆರ್.ನಾಗರಾಜ್, ಖಜಾಂಚಿ ಎಂ.ಸೋಮಪ್ಪ, ಟ್ರಸ್ಟಿಗಳಾದ ಡಿ.ತಿಮ್ಮಣ್ಣ, ಟಿ.ಎಲ್.ಮಂಜುನಾಥ್, ಹೆಚ್.ಶ್ರೀನಿವಾಸ್ ಈ ಸಂದರ್ಭದಲ್ಲಿ ಹಾಜರಿದ್ದರು.