i
ಮಾ.15ರಿಂದ ಅನ್ಯ ಉದ್ದೇಶಕ್ಕೆ ನೀರು ಬಳಸಿದ್ರೆ ದಂಡ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾವೇರಿ ನೀರನ್ನು ಕುಡಿಯುವ ಉದ್ದೇಶ ಹೊರತುಪಡಿಸಿ ಅನ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಿ ಈಗಾಗಲೇ ಜಲಮಂಡಳಿಯ ಕಾಯ್ದೆ ಅಡಿ ಆದೇಶ ಹೊರಡಿಸಲಾಗಿದ್ದು,ಜನರು ಸಹ ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಅವರು, ಮಾ.15ರಿಂದ ಇದನ್ನು ಅನುಷ್ಠಾನಗೊಳಿಸಲಾಗುವುದು; ಅನ್ಯ ಉದ್ದೇಶಕ್ಕೆ ಬಳಸುವುದು ಕಂಡುಬಂದಲ್ಲಿ ನಮ್ಮ ಮಂಡಳಿ ಸಿಬ್ಬಂದಿ ಸ್ಥಳದಲ್ಲಿಯೇ ಆದೇಶದ ಅನುಸಾರ ದಂಡ ವಿಧಿಸಲಿದ್ದಾರೆ;ಈ ಕುರಿತು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ಅಪಾರ್ಟ್ಮೆಂಟ್ ನಿವಾಸಿಗಳಿಗೆ ನೀರು ಬಳಕೆ ಕುರಿತು ಗೈಡ್ಲೈನ್ಸ್ಗಳನ್ನು ಸಂಬಂಧಿಸಿದವರೊಂದಿಗೆ ಕುಳಿತು ಚರ್ಚಿಸಿ ಹೊರಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಂಡಳಿ ತಾಂತ್ರಿಕ ಸಮಿತಿ ಸದಸ್ಯರು ಹಾಗೂ ಐಐಎಸ್ಸಿ ತಜ್ಞರಾದ ಪ್ರೊ.ವಿಶ್ವನಾಥ, ಚೀಪ್ ಎಂಜನಿಯರ್ ಜಯಪ್ರಕಾಶ ಮತ್ತಿತರರು ಇದ್ದರು.