i
ಮಹಿಳೆಯರದು ಬಹುಮುಖ ವ್ಯಕ್ತಿತ್ವ-
ಜಿಲ್ಲಾ ನ್ಯಾಯಧೀಶೆ ಕೆ.ಬಿ.ಗೀತಾ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: Women are versatile personalities-
District Magistrate KB Geeta ಮಹಿಳೆಯರದು ಬಹುಮುಖ ವ್ಯಕ್ತಿತ್ವ. ಅಪಾರ ಪ್ರತಿಭೆ ಹೊಂದಿರುವ ಅವರು ಸಂಸಾರ ಹಾಗೂ ಸಮಾಜದ ಸಮತೋಲನದ ನಡುವೆ ಸಾಧನೆ ಮಾಡುತ್ತಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಕೆ.ಬಿ.ಗೀತಾ ಹೇಳಿದರು.
ಭಾನುವಾರ ಚಿತ್ರದುರ್ಗ ನಗರದ ಮಠದ ಕುರುಬರಹಟ್ಟಿಯ ಬಸವೇಶ್ವರ ವಿದ್ಯಾಸಂಸ್ಥೆ ಆವರಣದಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಶ್ರೀ ಬಸವೇಶ್ವರ ವಿದ್ಯಾಸಂಸ್ಥೆ, ರೈನ್ ಟ್ರಸ್ಟ್, ಸ್ವಯಂ ಸೇವಾ ಸಂಸ್ಥೆ ಮತ್ತು ವಿವಿಧ ಮಹಿಳಾ ಸ್ವ-ಸಹಾಯ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಮಹಿಳಾ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸದಾ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಮಹಿಳೆಯರು ಸಂಸಾರ, ಮಕ್ಕಳ ಶಿಕ್ಷಣ ಮತ್ತು ಸಾಮಾಜಿಕ ಒಡನಾಟವನ್ನು ಸಂಭಾಳಿಸಿಕೊಂಡು ಹೋಗುವ ಅನಿವಾರ್ಯತೆಗೆ ಸಿಲುಕಿದ್ದಾಳೆ. ಮಹಿಳೆಯರು ಆನೇಕ ಶೋಷಣೆಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಇತ್ತೀಚಿಗೆ ಮಹಿಳೆಯರ ವಿರುದ್ಧದ ದೌರ್ಜನ್ಯ ಮತ್ತು ಶೋಷಣೆ ತಗ್ಗಿರುವುದು ಸಂತಸದ ವಿಚಾರ ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಎಂ. ವಿಜಯ್ ಮಾತಾಡಿ, ಇಂದು ಮಹಿಳೆಯರು ಎಲ್ಲಾ ರಂಗಗಳಲ್ಲಿಯೂ ಸಾಧನೆ ಮಾಡಿದ್ದಾರೆ. ಪ್ರಮುಖ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಮಾತಿಗೆ ಈ ವೇದಿಕೆ ಸಾಕ್ಷಿಯಾಗಿದೆ ಎಂದರು.
ಅಪರಾಧಶಾಸ್ತ್ರದ ವಿಶ್ರಾಂತ ಪ್ರಾಧ್ಯಾಪಕ ಡಾ.ನಟರಾಜ್ ಮಾತನಾಡಿ, ಮಹಿಳೆಯರು ಹಾಗೂ ಮಕ್ಕಳ ನೆರವಾಗಿ ಅನೇಕ ಕಾನೂನುಗಳನ್ನು ರೂಪಿಸಲಾಗಿದೆ. ಈ ಕಾನೂನಿನ ನೆರವು ಪಡೆಯುವಹುದು. ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಬಹುದು. ಮಹಿಳೆಯರು ಸಾಮಾಜಿಕ ಸ್ಥಾನಮಾನ ಭದ್ರಪಡಿಸಿಕೊಳ್ಳಬೇಕು. ಕಾನೂನಿನ ಅರಿವಿನ ಜೊತೆಗೆ ತಮ್ಮ ಹಕ್ಕುಗಳ ರಕ್ಷಣೆ ಮಾಡಿಕೊಳ್ಳಬೇಕು. ಅನ್ಯಾಯ ಹಾಗೂ ದೌರ್ಜನ್ಯದ ಸಂದರ್ಭಗಳನ್ನು ಧೈರ್ಯವಾಗಿ ಎದುರಿಸಬೇಕು ಎಂದರು.
ಬಸವೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷೆ ಪ್ರಭಾವತಿ ಶಂಕರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ವಕೀಲರ ಸಂಘದ ಅಧ್ಯಕ್ಷ ವೈ. ತಿಪ್ಪೇಸ್ವಾಮಿ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಐ.ಬಿ.ಅಕ್ಷತಾ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರರಾದ ಪಿ.ಜಿ.ಅನಿತಾ ಲಕ್ಷ್ಮಿ ಆಚಾರ್ಯ, ಕೋಡೇನಹಟ್ಟಿ ಟಿ. ಸುಮ, ಪರಿಸರವಾದಿ ಪಿ.ವಿ.ಮಲ್ಲಿಕಾರ್ಜುನಪ್ಪ, ಸಮಾಜ ಸೇವಕರಾದ ಮಾರಗಟ್ಟ ತಿಪ್ಪೇಸ್ವಾಮಿ, ಕಿರಣ್, ಶಂಕರಪ್ಪ, ವಿವಿಧ ಮಹಿಳಾ ಸಂಘದ ಮಹಿಳೆಯರು, ಮಕ್ಕಳು ಭಾಗವಹಿಸಿದ್ದರು.ಎಂ.ಮಂಜುನಾಥ್ ಕಳ್ಳಿಹಟ್ಟಿ ಇವರು ಪ್ರಾಸ್ತಾವಿಕ ಮಾತನಾಡಿದರು. ವಿ.ತಿಪ್ಪೇಸ್ವಾಮಿ ಮಲ್ಲೂರಹಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ಅರುಣಾ ಪ್ರಾರ್ಥನೆ ಮಾಡಿದರು.