i
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು– ಡಾ.ರೇಖಾ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ನೆಹರು ಯುವ ಕೇಂದ್ರ ಚಿತ್ರದುರ್ಗ, ಆದರ್ಶ ಯುವಕ ಸಂಘ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ದೇವರಾಜ ಅರಸು ಕೈಗಾರಿಕಾ ತರಬೇತಿ ಸಂಸ್ಥೆ ಹೊಳಲ್ಕೆರೆ ಸಹಯೋಗದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ದೇವರಾಜ ಅರಸು ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಸಸಿಗೆ ನೀರು ಹಾಕುವುದರ ಮುಖಾಂತರ ಉದ್ಘಾಟಿಸಿ ಮಾತನಾಡಿದ ತಾಲೂಕು ಆರೋಗ್ಯ ಅಧಿಕಾರಿ ಡಾ.ರೇಖಾ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಮತದಾನ ಒಂದು ರಾಷ್ಟ್ರದ ಅಭ್ಯುದಯಕ್ಕೆ ಪೂರಕವಾಗಲಿದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಎಲ್. ಕೆ.ಶಿವಕುಮಾರ್ ಮಾತನಾಡಿ ಉತ್ತಮ ನಾಯಕನ ಆಯ್ಕೆಗಾಗಿ ಮತದಾನವು ಅತ್ಯಂತ ಶ್ರೇಷ್ಠವಾಗಿದ್ದು ಒಮ್ಮೆ ಮತದಾನ ಮಾಡಿದರೆ ಐದು ವರ್ಷಗಳ ಕಾಲ ಬದಲಾವಣೆ ಮಾಡಲು ಸಾಧ್ಯವಿಲ್ಲದ ಕಾರಣ ಚುನಾವಣಾ ಸಂದರ್ಭದಲ್ಲಿ ಸಮರ್ಥ ನಾಯಕನ ಆಯ್ಕೆ ಸೂಕ್ತ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎನ್. ಶಿವಮೂರ್ತಿ ಮಾತನಾಡಿ, ಯಾವುದೇ ಆಮಿಷಕ್ಕೆ ಬಲಿಯಾಗದೆ ನಿರ್ಭೀತಿಯಿಂದ ಮತದಾನ ಮಾಡಿ ಮೂಲಭೂತ ಸೌಕರ್ಯಗಳಾದ ಶಿಕ್ಷಣ.ಆರೋಗ್ಯ.ಶುದ್ಧ ಕುಡಿಯುವ ನೀರು ಪಡೆಯಲು ಉತ್ತಮ ನಾಯಕನ ಆಯ್ಕೆ ಅತೀ ಮುಖ್ಯ ಈ ದಿಶೆಯಲ್ಲಿ ಎಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕೆಂದರು.
ವಕೀಲರ ಸಂಘದ ಉಪಾಧ್ಯಕ್ಷ ಎಚ್ ರಮೇಶ್, ಕಾರ್ಯದರ್ಶಿ ಎಸ್ ಸಿದ್ದೇಶ್, ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕದ ಆರ್ ಅಣ್ಣಪ್ಪ, ತಾಲೂಕು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಣ್ಣ, ಹಿರಿಯ ಆರೋಗ್ಯ ನಿರೀಕ್ಷಕ ರಂಗನಾಥ್, ಶ್ರೀನಿವಾಸ್, ದೇವರಾಜ್ ಅರಸು ಕಾಲೇಜಿನ ಜಗನ್ನಾಥ್ ಹಾಗೂ ಇತರರು ಉಪಸ್ಥಿತರಿದ್ದರು.