i
ದಾವಣಗೆರೆ ಅಭ್ಯರ್ಥಿ ಬದಲಿಸಲು ಬಿಜೆಪಿ ಮುಖಂಡರ ಆಗ್ರಹ…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸುವಂತೆ ಬಿಜೆಪಿ ಹೈಕಮಾಂಡ್ ಗಮನ ಸೆಳೆಯಲು ರೇಣುಕಾಚಾರ್ಯ ಅಂಡ್ ಟೀಂ ವತಿಯಿಂದ ಮಾಜಿ ಸಚಿವ ಎಸ್ಎ ರವೀಂದ್ರನಾಥ್ ರವರ ನಿವಾಸದಲ್ಲಿ ಗೌಪ್ಯ ಸಭೆ ನಡೆಸಲಾಯಿತು., ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಭೇಟಿಗೆ ನಿರ್ಧಾರ ಮಾಡಲಾಯಿತು.
ವ್ಯಕ್ತ ಪಡಿಸಿದ್ದಾರೆ. ಹಾಲಿ ಸಂಸದ ಜಿಎಂ ಸಿದ್ದೇಶ್ವರ ವಿರುದ್ಧ ದೊಡ್ಡ ಹೋರಾಟವೇ ಸುರುವಾಗಿದೆ. ಶಿವಮೊಗ್ಗ ಬರುವ ಪ್ರಧಾನಿ ನರೇಂದ್ರ ಮೋದಿ ಗಮನಕ್ಕೆ ತಮ್ಮ ಅಸಮಧಾನ ಹೇಳಿಕೊಳ್ಳಲು ಅಸಮಾಧಾನಗೊಂಡವರ ತಂಡ ನಿರ್ಧರಿದೆ.
ಈ ಸಭೆಯಲ್ಲಿ ಮಾಜಿ ಸಚಿವ ಎಸ್ಎ ರವೀಂದ್ರನಾಥ್, ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್, ಎಂಪಿ ರೇಣುಕಾಚಾರ್ಯ, ಮಾಜಿ ಶಾಸಕ ಬಸವರಾಜ್ ನಾಯ್ಕ್, ದಾವಣಗೆರೆ ದಕ್ಷಿಣ ಪರಾಜೀತ ಅಭ್ಯರ್ಥಿ ಬಿಜಿ ಅಜಯ್ ಕುಮಾರ್, ದಾವಣಗೆರೆ ಉತ್ತರ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಸೇರಿದ್ದರಿಂದ ಸಭೆಗೆ ಹಾಜರಾಗಿದ್ದ ಸಂಸದರ ಬಳಗಕ್ಕೆ ಬೆವರು ಬರುವಂತೆ ಮಾಡಿತ್ತು.