i
5 ಲಕ್ಷ ಸಹಾಯಧನದೊಂದಿಗೆ ಉದ್ದಿಮೆ ಸ್ಥಾಪಿಸಲು ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮವು ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಿದೆ. ನಿಗಮವು ೬೦ ದಿನಗಳ ಟೈಲರಿಂಗ್ ಹಾಗೂ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್, ೩೦ ದಿನಗಳ ಬೊಟಿಕ್, ಅಸಿಸ್ಟೆಂಟ್ ಹೇರ್ ಥೆರಪಿಸ್ಟ್, ಫ್ಯಾಷನ್ ಡಿಸೈನರ್, ಹಾರ್ಡ್ವೇರ್ ರಿಪೇರ್ ಟೆಕ್ನಿಷಿಯನ್, ಹೇರ್ ಸ್ಟೈಲಿಸ್ಟ್, ಬ್ಯೂಟಿ ಥೆರಪಿಸ್ಟ್, ಸೋಲಾರ್ ಪ್ಯಾನಲ್ ಇನ್ಸ್ಟಾಲೇಷನ್ ಅಂಡ್ ಸರ್ವೀಸ್ ತರಬೇತಿ ನೀಡಲಿದೆ. ಉದ್ದಿಮೆ ಸ್ಥಾಪಿಸಲು ಸಹಾಯಧನ: ಅದೇ ರೀತಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪ.ಪಂಗಡದವರಿಗಾಗಿ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮಕ್ಕೆ ಸಂಬಂಧಿಸಿದಂತೆ ಜಿಲ್ಲಾ/ತಾಲ್ಲೂಕು ಮಟ್ಟದಲ್ಲಿ ಉದ್ದಿಮೆ ಸ್ಥಾಪಿಸಲು ಶೇ.೭೦ರಷ್ಟು ಅಥವಾ ೫ ಲಕ್ಷ ರೂ.ಗಳ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ. ತರಬೇತಿ ಹಾಗೂ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲಿಚ್ಛಿಸುವವರು ಭರ್ತಿ ಮಾಡಿದ ತಮ್ಮ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಮಾರ್ಚ್ ೩೧ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.೦೮೧೬-೨೨೮೦೧೬೫ನ್ನು ಸಂಪರ್ಕಿಸಬೇಕೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಡಾ: ಸಿ.ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.