i
ವಿಜೃಂಭಣೆಯಿಂದ ನಡೆದ ಶನಿಮಹಾತ್ಮ ಸ್ವಾಮಿಯ ಬ್ರಹ್ಮ ರಥೋತ್ಸವ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶನಿಮಹಾತ್ಮ ಸ್ವಾಮಿಯ 69ನೇ ವರ್ಷದ ಬ್ರಹ್ಮ ರಥೋತ್ಸವ ಮಂಗಳವಾರ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
ಸುಡು ಬಿಸಿಲಿನ ನಡುವೆ ಬ್ರಹ್ಮರಥೋತ್ಸವಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರುಸಂಖ್ಯೆಯಲ್ಲಿ ಭಕ್ತರು ಬಂದು ಸೇರಿದ್ದರು.
ಬ್ರಹ್ಮರಥೋತ್ಸವಕ್ಕೆ ಭಕ್ತಿಯಿಂದ ಬಾಳೆಹಣ್ಣು, ದವನ ಅರ್ಪಿಸಿ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು. ಬ್ರಹ್ಮರಥೋತ್ಸವಕ್ಕೂ ಮುನ್ನಶನಿಮಹಾತ್ಮ ಸ್ವಾಮಿಗೆ ಪೂರ್ಣಕುಂಭ ಕಳಸದೊಂದಿಗೆ ಪೂಜಾ ಕಾರ್ಯ ನೆರವೇರಿಸಲಾಯಿತು.
ರಥೋತ್ಸವದ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ ಅಲಂಕಾರ ಮಾಡಲಾಗಿತ್ತು. ಬ್ರಹ್ಮರಥೋತ್ಸವಕ್ಕೆ ಬಂದ ಭಕ್ತರಿಗೆ ಮುದ್ದೆ, ಕಾಳು ಸಾರು, ಪಾಯಸದ ಊಟ ವ್ಯವಸ್ಥೆ ಮಾಡಲಾಗಿತ್ತು.
ಶಾಸಕ ಧೀರಜ್ ಮುನಿರಾಜು ಅವರು ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿಯವರು, ಧರ್ಮದರ್ಶಿಗಳು ಉಪಸ್ಥಿತರಿದ್ದರು.