i
ಕರ್ಣಾಟಕ ಗ್ರಾಮೀಣ ಬ್ಯಾಂಕ್, ವಿಮಾ ಕಂಪನಿಗೆ 10 ಲಕ್ಷ ದಂಡ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಜೀವ ವಿಮೆ ಮೊತ್ತ ಪಾವತಿಸಲು ವಿಳಂಬ ಮಾಡಿದ ಶಿವಮೊಗ್ಗದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಯೂನಿವರ್ಸಲ್ ಸೊಂಪೊ ಜನರಲ್ ಇನ್ಶೂರೆನ್ಸ್ ಕಂಪನಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ ಆದೇಶಿಸಿದೆ. ವಿಮಾ ಮೊತ್ತಕ್ಕೆ ಶೇ.10 ಬಡ್ಡಿ ಮತ್ತು ಅರ್ಜಿದಾರರಿಗೆ ಮಾನಸಿಕ ಪರಿಹಾರ ಹಾಗೂ ಕೋರ್ಟ್ ವೆಚ್ಚವನ್ನು ನೀಡಲು ಸೂಚಿಸಿದೆ.
ಗೋವಿಂದನಾಯ್ಕ ಎಂಬುವವರು ಆಯನೂರಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ 2014ರಲ್ಲಿ ಉಳಿತಾದ ಖಾತೆ ತೆರೆದಿದ್ದರು. ಈ ಖಾತೆಗೆ ಯೂನಿವರ್ಸಲ್ ಸೊಂಪೊ ಜನರಲ್ ಇನ್ಶೂರೆನ್ಸ್ ಕಂಪನಿಯಿಂದ ಕೆಬಿಎಲ್ ಸುರಕ್ಷಾ ಪಾಲಿಸಿ ಹೊಂದಿದ್ದರು. ಇದರ ನಡುವೆ 2020ರ ಜೂನ್ 2 ರಂದು ವಿದ್ಯುತ್ ಶಾಕ್ನಿಂದ ಗೋವಿಂದನಾಯ್ಕ ಮೃತಪಟ್ಟಿದ್ದರು. ಬಳಿಕ ಮೃತರ ತಂದೆ ಬ್ಯಾಂಕ್ ಮತ್ತು ವಿಮಾ ಕಂಪನಿಯನ್ನು ಸಂಪರ್ಕಿಸಿ ವಿಮಾ ಪರಿಹಾರ ಮೊತ್ತ ಸಂದಾಯ ಮಾಡುವಂತೆ ಮನವಿ ಮಾಡಿದ್ದರು.
ಆದರೆ, ಬ್ಯಾಂಕ್ನವರು ಮೃತರ ಖಾತೆ ಮುಕ್ತಾಯಗೊಳಿಸಿರುವುದರಿಂದ ಕೆಬಿಎಲ್ ಸುರಕ್ಷಾ ಪ್ರಮಾಣಪತ್ರ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು. ಮತ್ತೊಂದೆಡೆ, ವಿಮಾ ಕಂಪನಿಯವರು ಪರಿಹಾರ ಕೋರಿಕೆ ಅರ್ಜಿ ತಡವಾಗಿ ಸಲ್ಲಿಸಿದ್ದಾರೆ ಎಂದು ಹೇಳಿ ಪರಿಹಾರ ಮೊತ್ತ ನೀಡಲು ನಿರಾಕರಿಸಿದ್ದರು. ಹೀಗಾಗಿ ಮೃತ ಗೋವಿಂದನಾಯ್ಕ ತಂದೆ ಗ್ರಾಹಕರ ನ್ಯಾಯಾಲಯದ ಮೊರೆ ಹೋಗಿದ್ದರು.