i
ಚಿರತೆ ದಾಳಿ: ಕೊಟ್ಟಿಗೆಯಲ್ಲಿದ್ದ ಎರಡು ಹಸುಗಳು ಬಲಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಚಿರತೆ ದಾಳಿಗೆ ಎರಡು ಹಸುಗಳು ಬಲಿಯಾಗಿರುವ ಘಟನೆ ತಾಲೂಕಿನ ಮೆಳೇಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಾಪುರ ಗ್ರಾಮದಲ್ಲಿ ನಡೆದಿದೆ.
ರೈತ ಮುನಿಕೃಷ್ಣ ಎಂಬುವರಿಗೆ ಸೇರಿದ ಎರಡು ಹಸುಗಳು ಚಿರತೆ ದಾಳಿಗೆ ಬಲಿಯಾಗಿವೆ.
ರೈತ ಮುನಿಕೃಷಣ್ ಎಂದಿನಂತೆ ತಮ್ಮ ಹಸುಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಇಂದು ತಡರಾತ್ರಿ ಸುಮಾರು ಎರಡು ಗಂಟೆ ಸಮಯದಲ್ಲಿ ಹಸುಗಳ ಮೇಲೆ ಎರಗಿದ ಚಿರತೆ ಎರಡು ಹಸುಗಳನ್ನು ಬಲಿ ಪಡೆದಿದೆ. ಬೆಲೆ ಬಾಳುವ ಹಸುಗಳನ್ನ ಕಳೆದುಕೊಂಡ ರೈತ ಕಂಗಾಲಾಗಿದ್ದಾನೆ.
ಚಿರತೆ ದಾಳಿಯಿಂದ ಭಯಗೊಂಡಿರುವ ಗ್ರಾಮಸ್ಥರು ಕೂಡಲೇ ಚಿರತೆಯನ್ನ ಸೆರೆಹಿಡಿಯುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.