i
ಹಾಸನ ಅಭ್ಯರ್ಥಿ ಬದಲಿಸುವಂತೆ ಹೆಚ್ ಡಿಕೆ ಗೆ ಶಾ ಸೂಚನೆ…
ಚಂದ್ರವಳ್ಳಿ ನ್ಯೂಸ್, ಹಾಸನ:
ಲೋಕಸಭೆ ಚುನಾವಣೆಗೂ ಮುನ್ನವೇ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಕಾಣುತ್ತಿವೆ. ಜೆಡಿಎಸ್ ಭದ್ರಕೋಟೆಯಾಗಿರುವ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಮೈತ್ರಿ ಅಭ್ಯರ್ಥಿ ಎಂದು ಘೋಷಿಸಿರುವುದರಿಂದ ಬಿಜೆಪಿ ನಾಯಕರು ಅಸಮಾಧಾನಗೊಂಡಿದ್ದಾರೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ಹಾಸನದಿಂದ ಸ್ಪರ್ಧಿಸುವ ವಿಚಾರದಲ್ಲಿ ಬಿಜೆಪಿ ನಾಯಕರು ಆಗಾಗ್ಗೆ ವ್ಯತಿರಿಕ್ತ ಹೇಳಿಕೆ ನೀಡುತ್ತಿರುವುದು ಜೆಡಿಎಸ್ ನಾಯಕರನ್ನು ಕಂಗೆಡಿಸಿದೆ.
ಮಾಜಿ ಶಾಸಕ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ.ಜೆ. ಗೌಡ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಎ.ಟಿ.ರಾಮಸ್ವಾಮಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯೋಗಾ ರಮೇಶ್ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ಇತ್ತೀಚೆಗೆ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಿದರು. ಮೈತ್ರಿ ಅಭ್ಯರ್ಥಿಯ ಬಗ್ಗೆ ಗೌಡರ ಏಕಪಕ್ಷೀಯ ನಿರ್ಧಾರವನ್ನು ಅವರು ಬಲವಾಗಿ ವಿರೋಧಿಸಿದರು.