i
ಜೆಡಿಎಸ್ ನಾಯಕ ಕುಮಾರಸ್ವಾಮಿ ಶಸ್ತ್ರ ಚಿಕಿತ್ಸೆ ಯಶಸ್ವಿಗಾಗಿ ವಿಶೇಷ ಪೂಜೆ..
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಮೂರನೇ ಬಾರಿಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿರುವ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಶಸ್ತ್ರ ಚಿಕಿತ್ಸೆ ಸಂಪೂರ್ಣ ಯಶಸ್ವಿಯಾಗಲಿದೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಪಿಲಾಜನಹಳ್ಳಿ ಎಂ.ಜಯಣ್ಣ ನೇತೃತ್ವದಲ್ಲಿ ಹಿರಿಯೂರು ನಗರದ ಶ್ರೀತೇರು ಮಲ್ಲೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ರೈತರ ಕಣ್ಮಣಿ ಕುಮಾರಸ್ವಾಮಿ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪಡೆಯುತ್ತಿದ್ದು ಅವರ ಶಸ್ತ್ರ ಚಿಕಿತ್ಸೆಯು ಯಶಸ್ವಿಯಾಗಿ ಆರೋಗ್ಯವಂತರಾಗಿ ಆಸ್ಪತ್ರೆಯಿಂದ ಬರಬೇಕು. ರೈತರ ಧ್ವನಿಯಾಗಿರುವ ಅವರಿಗೆ ಆಯುರಾರೋಗ್ಯ ಸಿಗಲಿ ಎಂದು ಹಾರೈಸಿ ಎಂ ಜಯಣ್ಣ ಸೇರಿದಂತೆ ಮತ್ತಿತರ ಜೆಡಿಎಸ್ ಕಾರ್ಯಕರ್ತರು ದೇವರಲ್ಲಿ ಪ್ರಾರ್ಥಿಸಿದರು.
ಹಿರಿಯೂರಿನ ದಕ್ಷಿಣ ಕಾಶಿ ಶ್ರೀತೇರುಮಲ್ಲೇಶ್ವರ ಸ್ವಾಮಿ ದೇವಾಲಯದಲ್ಲಿ ಕುಮಾರಸ್ವಾಮಿ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜೆಡಿಎಸ್ ಯುವ ಮುಖಂಡರಾದ ಎಚ್.ನಾಗರಾಜ್, ಕೆ. ಚಿದಾನಂದ್, ದಾದಾಪೀರ್, ರಘುನಾಥ್, ವಿ.ಹೆಚ್. ರಾಜು, ಓಬಳೇಶ್, ಗುಡ್ಡಪ್ಪ ಸೇರಿದಂತೆ ಅನೇಕ ಅಭಿಮಾನಿಗಳು ಪಾಲ್ಗೊಂಡಿದ್ದರು.