i
ಕೃಷಿ ಹೊಂಡಕ್ಕೆ ಬಿದ್ದು 5 ವರ್ಷದ ಬಾಲಕಿ ಸಾವು…
ಚಂದ್ರವಳ್ಳಿ ನ್ಯೂಸ್, ಸಾಗರ:
ಮನೆ ಸಮೀಪದ ಕೃಷಿ ಹೊಂಡಕ್ಕೆ ಕಾಲು ಜಾರಿ ಬಿದ್ದು ಐದು ವರ್ಷದ ಬಾಲಕಿ ಪ್ರಜ್ಞಾ ಮೃತಪಟ್ಟಿದ್ದಾಳೆ. ಬ್ಯಾಕೋಡು ಸಮೀಪದ ಚಂಗೊಳ್ಳಿಯಲ್ಲಿ ಘಟನೆ ಸಂಭವಿಸಿದೆ. ರವಿಚಂದ್ರ, ವೀಣಾ ದಂಪತಿ ಪುತ್ರಿ ಪ್ರಜ್ಞಾ, ಶಾಲೆಯಿಂದ ಮನೆಗೆ ಬಂದು ತನ್ನ ತಮ್ಮನೊಂದಿಗೆ ಆಟವಾಡುತ್ತಿದ್ದ ಸಂದರ್ಭ ಕೃಷಿ ಹೊಂಡಕ್ಕೆ ಕಾಲು ಜಾರಿ ಇಬ್ಬರೂ ಬಿದ್ದಿದ್ದಾರೆ. ಇವರ ಚೀರಾಟ ಕೇಳಿದ ಮನೆಯವರು ಸ್ಥಳಕ್ಕೆ ಬರುವಷ್ಟರಲ್ಲಿ ತಮ್ಮನನ್ನು ರಕ್ಷಿಸಿದ ಪ್ರಜ್ಞಾ, ತಾನು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.