i
ಹಿಂದುಳಿದ ವರ್ಗದವರು ಈಶ್ವರಪ್ಪರನ್ನು ಬೆಂಬಲಿಸಲು ಕರೆ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಹಿಂದುಳಿದ ವರ್ಗಗಳ ನಾಯಕ, ಬಿಜೆಪಿಯ ಹಿರಿಯ ಮುಖಂಡ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸ್ಪರ್ಧಿಸುತ್ತಿದ್ದು, ಎಲ್ಲಾ ಹಿಂದುಳಿದ ವರ್ಗದವರು ಈಶ್ವರಪ್ಪ ಅವರನ್ನು ಬೆಂಬಲಿಸುವAತೆ ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ವೇದಿಕೆ ಮನವಿ ಮಾಡಿದೆ.
ಶುಕ್ರವಾರ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ರಾಮಕೃಷ್ಣ ಮೂಡಲಿ, ಬಿಜೆಪಿ ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಅಧಿಕಾರಕ್ಕೆ ಬಂದಿದೆ. ಆ ಪಕ್ಷದ ರಾಷ್ಟ್ರೀಯ ನಾಯಕರು ಸಹ ಕುಟುಂಬ ರಾಜಕಾರಣವನ್ನು ಮಾಡುವುದಿಲ್ಲ ಎಂದು ಹೇಳುತ್ತಲೇ ಇದ್ದಾರೆ. ಆದರೆ, ರಾಜ್ಯದಲ್ಲಿ ಮಾತ್ರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ರಾಜಕಾರಣವನ್ನು ಮಾಡುತ್ತಲೇ ರಾಜ್ಯ ಬಿಜೆಪಿಯನ್ನು ತಮ್ಮ ಇಚ್ಛೆಗೆ ತಕ್ಕಂತೆ ನಡೆಸಿಕೊಳ್ಳುತ್ತಿದ್ದಾರೆ. ಈಶ್ವರಪ್ಪ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಪಕ್ಷ ಹೇಳಿದ ಕೆಲಸಗಳನ್ನು ಚಾಚೂತಪ್ಪದೇ ಮಾಡುತ್ತಲೇ ಬಂದಿದ್ದಾರೆ ಎಂದರು.
ಯಡಿಯೂರಪ್ಪನವರು ಕೇಂದ್ರದ ನಾಯಕರೊಂದಿಗೆ ಮುನಿಸಿಕೊಂಡು ಬಿಜೆಪಿ ತೊರೆದು ಕೆಜೆಪಿ ಕಟ್ಟಿದ ಸಂದರ್ಭದಲ್ಲಿಯೂ ಪಕ್ಷವನ್ನು ತೊರೆಯದೇ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡು ಪಕ್ಷವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಲೇ ಬಂದಿದ್ದಾರೆ. ಪಕ್ಷದ ‘ಒಂದು ಕುಟುಂಬಕ್ಕೆ ಒಂದು ಸ್ಥಾನ‘ ಎಂಬ ನಿಯಮಕ್ಕೆ ಬದ್ಧರಾಗಿ ತಾವು ರಾಜಕೀಯ ನಿವೃತ್ತಿ ಘೋಷಿಸುವ ವರೆಗೂ ತಮ್ಮ ಪತ್ರ ಕಾಂತೇಶ್ಗೆ ಟಿಕೆಟ್ ಕೇಳಲಿಲ್ಲ. ಹಿಂದೆ ರಾಣೇಬೆನ್ನೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕೆ.ಈ. ಕಾಂತೇಶ್ ಸ್ಪರ್ಧೆಗೆ ಅವಕಾಶವಿದ್ದರೂ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನಿಯಮದಂತೆ ಟಿಕೆಟ್ ಬೇಡ ಎಂದು ನಿರಾಕರಿಸಿದ್ದರು ಎಂದರು.
ಈ ಬಾರಿ ಕಾಂತೇಶ್ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗುವುದನ್ನು ಸಹಿಸದೆ ಈಶ್ವರಪ್ಪನವರ ಕುಟುಂಬದ ಏಳಿಗೆ ಸಹಿಸದೇ ಕಾಂತೇಶ್ಗೆ ಟಿಕೆಟ್ ತಪ್ಪಿಸಿದ್ದಾರೆ. ಯಡಿಯೂರಪ್ಪ ತಮಗೆ ಅಧಿಕಾರ ಬೇಕೆಂದಾಗೆಲ್ಲಾ ಇಂತಹ ಗೇಮ್ಗಳನ್ನೇ ಮಾಡಿಕೊಂಡು ಬಂದಿದ್ದಾರೆ. ಎಂದರು.
ಈಶ್ವರಪ್ಪ ಸ್ಪರ್ಧೆ ಮಾಡುತ್ತಿದ್ದಾರೆ. ಅವರ ಬೆಂಬಲಕ್ಕೆ ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ವೇದಿಕೆ ನಿಂತಿದ್ದು, ಕ್ಷೇತ್ರದ ಎಲ್ಲಾ ಹಿಂದುಳಿದ ವರ್ಗದವರೂ ಈಶ್ವರಪ್ಪ ಅವರನ್ನು ಚುನಾವಣೆಯಲ್ಲಿ ಬೆಂಬಲಿಸಿ ಯಡಿಯೂರಪ್ಪ ಕುಟುಂಬ ರಾಜಕಾರಣಕ್ಕೆ ತಿಲಾಂಜಲಿ ನೀಡಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಪ್ರಮುಖರಾದ ಸೀತಾರಾಮ್, ಕುಮಾರ್, ವಿಜಯ್, ಚಂದ್ರಶೇಖರ್, ರಾಜು, ಅಣ್ಣಪ್ಪ ಉಪಸ್ಥಿತರಿದ್ದರು.