i
ಮೆಸೇಜ್ ನಂಬಿ ಹಣ ಕಳೆದುಕೊಂಡ ಚಿನ್ನದ ವ್ಯಾಪಾರಿ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ;
ಚಿನ್ನದ ಮೇಲೆ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಿ ಎಂದು ಆಸೆ ಹುಟ್ಟಿಸಿ ವ್ಯಕ್ತಿಯೊಬ್ಬರಿಗೆ 2 ಲಕ್ಷ ರೂ. ವಂಚಿಸಲಾಗಿದೆ. ಶಿವಮೊಗ್ಗ ಸಿಇಎನ್ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆ ಆಗಿದ್ದು ಹೇಗೆ?–
ಶಿವಮೊಗ್ಗದ ವ್ಯಾಪಾರಿಯೊಬ್ಬರ (ಹೆಸರು ಗೌಪ್ಯ) ಮೊಬೈಲ್ಗೆ ಚಿನ್ನಾಭರಣ ಸಂಸ್ಥೆಯೊಂದರ ಹೆಸರಿನಲ್ಲಿ ಟೆಲಿಗ್ರಾಂ ಆಪ್ಲಿಕೇಷನ್ಗೆ ಮೆಸೇಜ್ಬಂದಿತ್ತು. ಅದರಲ್ಲಿರುವ ಲಿಂಕ್ಕ್ಲಿಕ್ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಸೂಚಿಸಲಾಗಿತ್ತು. ಟೆಲಿಗ್ರಾಂನಲ್ಲಿ ಅಲೀನಾ ಎಂಬ ಹೆಸರಿನಲ್ಲಿ ಶಿವಮೊಗ್ಗದ ವ್ಯಾಪಾರಿಗೆ ಮೆಸೇಜ್ಮಾಡಿ ಹೂಡಿಕೆ ಕುರಿತು ಮಾಹಿತಿ ನೀಡಲಾಗಿತ್ತು. ಹಣ ಹೂಡಿಕೆ ಮಾಡಿ ಪ್ರತಿದಿನ 8 ಸಾವಿರ ರೂ. ಕಮಿಷನ್ಪಡೆಯಬಹುದು ಎಂದು ನಂಬಿಸಲಾಗಿತ್ತು ಎಂದು ಆರೋಪಿಸಲಾಗಿದೆ.
ಹಣ ವಿತ್ ಡ್ರಾ ಮಾಡಲಾಗಲಿಲ್ಲ-
ಅಲೀನಾ ಮೆಸೇಜ್ನಂಬಿದ ಶಿವಮೊಗ್ಗದ ವ್ಯಾಪಾರಿ 2 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದರು. ಆದರೆ ಹಣವನ್ನು ವಿತ್ಡ್ರಾ ಮಾಡಲು ಸಾಧ್ಯವಾಗಲಿಲ್ಲ. ಈ ಕುರಿತು ಅಲೀನಾಗೆ ಟೆಲಿಗ್ರಾಂ ಮಾಡಿದಾಗ ವಿತ್ಡ್ರಾ ಮಾಡಲು 5 ಸಾವಿರ ರೂ. ಪಾವತಿಸಬೇಕು ಎಂದು ತಿಳಿಸಲಾಗಿತ್ತು. ಅನುಮಾನಗೊಂಡ ಶಿವಮೊಗ್ಗದ ವ್ಯಾಪಾರಿ ಕೊನೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.