i
ಹಿರಿಯೂರು ವಾಣಿ ಸಕ್ಕರೆ ಪ್ರಥಮ ದರ್ಜೆ ಕಾಲೇಜ್ ಪ್ರಾಂಶುಪಾಲ ಮಹೇಶ್ ಅವರ ಪತ್ನಿ ಶಶಿಕಲಾ ವಿಧಿವಶ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ವಾಣಿ ಸಕ್ಕರೆ ಪ್ರಥಮ ದರ್ಜೆ ಕಾಲೇಜ್ ಪ್ರಾಂಶುಪಾಲ ಆರ್.ಮಹೇಶ್ ಅವರ ಪತ್ನಿ ಜಿ.ಎಂ.ಶಶಿಕಲಾ(48) ವಿಧಿವಶರಾಗಿದ್ದಾರೆ.
ಮೃತರು ನಿಮೋನಿಯಾ ರೋಗದಿಂದ ನರಳುತ್ತಿದ್ದು ಅವರನ್ನು ಬೆಂಗಳೂರಿನ ಕೊಲಂಬಿಯಾ ಏಷ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ಮೃತ ಶಶಿಕಲಾ ಅವರು ಚಿತ್ರದುರ್ಗ ನಗರದ ಕೆಹೆಚ್ ಬಿ ಕಾಲೋನಿಯಲ್ಲಿ ವಾಸವಾಗಿದ್ದು ಪತಿ ಹಿರಿಯೂರು ವಾಣಿ ಸಕ್ಕರೆ ಪ್ರಥಮ ದರ್ಜೆ ಕಾಲೇಜ್ ಪ್ರಾಂಶುಪಾಲ ಆರ್.ಮಹೇಶ್, ಪುತ್ರಿ, ಪುತ್ರ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಅಂತ್ಯ ಸಂಸ್ಕಾರ- ಹಿರಿಯೂರು ತಾಲೂಕಿನ ಅಂಬಲಗೆರೆ ಸಮೀಪದ ಉಪ್ಪಾರಹಳ್ಳಿಯಲ್ಲಿ ಸೋಮವಾರ ಮಧ್ಯಾಹ್ನ 12.30ಕ್ಕೆ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.