i
ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ವಿದ್ಯಾರ್ಥಿ ವೇತನಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದ ಮೌಲ್ಯ ಹೆಚ್ಚಿಸಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಹೇಳಿದರು.
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎನ್ಇಎಸ್ ಎಜುಕೇಷನ್ ಅಸಿಸ್ಟಾನ್ಸ್ ಟ್ರಸ್ಟ್ ವತಿಯಿಂದ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿವಿಧ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ೨೦೨೩-೨೪ ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದರು.
ಸಾಧಿಸುವ ಕನಸಿಗಿಂತ, ಗೆಲ್ಲುವ ಮನಸ್ಸು ಮಾಡಬೇಕಿದೆ. ಸಾಧನೆಯ ಜೊತೆಯಲ್ಲಿ ಇತರರನ್ನು ಗೆಲ್ಲಿಸುವ ಹಂಬಲ ನಮ್ಮದಾಗಬೇಕಿದೆ. ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳಿ ಎಂದರು.
ಎನ್ಇಎಸ್ ಎಜುಕೇಷನ್ ಅಸಿಸ್ಟಾನ್ಸ್ ಟ್ರಸ್ಟ್ ಅಧ್ಯಕ್ಷ ಟಿ.ಆರ್.ಅಶ್ವಥ ನಾರಾಯಣಶೆಟ್ಟಿ ಮಾತನಾಡಿ, ಕಳೆದ ಅನೇಕ ವರ್ಷಗಳಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು, ಸಣ್ಣ ಇಡಿಗಂಟಿನಿAದ ಪ್ರಾರಂಭವಾಗಿ ಇಂದು ಒಟ್ಟು ಇಪ್ಪತ್ತು ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಹೇಳಿದರು.
ಈ ಸಾಲಿನಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ವಿವಿಧ ವಿದ್ಯಾಸಂಸ್ಥೆಗಳ ಪ್ರಾಥಮಿಕದಿಂದ ಪದವಿಯ ವರೆಗಿನ ೩೨೦ ವಿದ್ಯಾರ್ಥಿಗಳಿಗೆ ಒಟ್ಟು ೨೦ ಲಕ್ಷ ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಎನ್.ಟಿ.ನಾರಾಯಣರಾವ್, ಅನಂತದತ್ತ, ಕುಲಸಚಿವ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಲೆಕ್ಕಪತ್ರ ವಿಭಾಗದ ಸಂಜಯ್ ಉಪಸ್ಥಿತರಿದ್ದರು.