i
ಘಾಟಿಸುಬ್ರಹ್ಮಣ್ಯ ಹುಂಡಿ ಹಣ ಎಣಿಕೆ: 53ಲಕ್ಷ ಹಣ ಸಂಗ್ರಹ.!
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 53,54,401 ರೂಪಾಯಿ ಕಾಣಿಕೆ ಹಣ ಸಂಗ್ರಹವಾಗಿದೆ. ಮಾ.25 ಸೋಮವಾರ ನಡೆದಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆಮಾಡಲಾಗಿದ್ದು ಹುಂಡಿಹಣ ಎಣಿಕೆಯಲ್ಲಿ 53,54401 ಲಕ್ಷ ನಗದು, 1ಗ್ರಾಂ. 300 ಮಿಲಿ ಚಿನ್ನ, 1ಕೆ.ಜಿ.540ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.
ಹುಂಡಿ ಹಣ ಎಣಿಕೆಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕಅಧಿಕಾರಿ ನಾಗರಾಜು, ಮುಜರಾಯಿ ಇಲಾಖೆ ತಹಶೀಲ್ದಾರ್ ಜೆ.ಜೆ.ಹೇಮಾವತಿ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ಕೆನರಾ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದಸಿಬ್ಬಂದಿ ಭಾಗವಹಿಸಿದ್ದರು.