i
ಮಾರ್ಚ್-25ರಂದು ಲಕ್ಷ್ಮೀ ವೆಂಕಟೇಶ್ವರಸ್ವಾಮಿ ಬ್ರಹ್ಮರಥೋತ್ಸವ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ಇತಿಹಾಸ ಪ್ರಸಿದ್ದ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಸ್ವಾಮಿ ಬ್ರಹ್ಮರಥೋತ್ಸವ, ಸಕಲ ಸಿದ್ದತೆ ನಡೆದಿದೆ. ಬ್ರಹ್ಮರಥೋತ್ಸದ ಪ್ರಯುಕ್ತ ದೇಗುಲವನ್ನು ವಿದ್ಯುತ್ದೀಪಗಳಿಂದ ಅಲಂಕರಿಸಲಾಗಿದೆ. ಮಾರ್ಚ್-25 ರಂದು ಸೋಮವಾರ ಮಧ್ಯಾಹ್ನ 12-30 ರಿಂದ ಒಂದು 1-15 ರೊಳಗಿನ ಅಭಿಜಿನ್ ಲಗ್ನದಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ.
ರಥೋತ್ಸವದ ನಂತರ ಅನ್ನಸಂತರ್ಪಣೆ ಹಾಗೂ ವಿವಿಧ ಸಂಘಟನೆಗಳ ಮೂಲಕ ಪಾನಕ ಮಜ್ಜಿಗೆ ವಿತರಣೆ ಕಾರ್ಯಕ್ರಮಗಳಿಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ರಾತ್ರಿ 7 ಗಂಟೆಗೆ ವರ್ಣರಜಿಂತ ಬಾಣಬಿರುಸುಗಳ ಪ್ರದರ್ಶನದ ಜೊತೆಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ.
ತೂಬಗೆರೆ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರದಂದು ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿಯ ಕಲ್ಯಾಣೋತ್ಸವವನ್ನು ಹಮ್ಮಿಕೊಂಡಿದ್ದು ಜ್ಯೋತಿನಗರದ ಗಾಣಿಗ ಸಮುದಾಯದ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿಯ ಗರುಡೋತ್ಸವವನ್ನು ಮಂಗಳ ವಾದ್ಯಗಳ ಮೂಲಕ ದೇವರನ್ನು ಹೂವಿನ ಪಲ್ಲಕ್ಕಿಯಲ್ಲಿ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಮೆರವಣಿಗೆ ಕಾರ್ಯಕ್ರಮದಲ್ಲಿ ಎಸ್ಆರ್ ಮುನಿರಾಜು,ಟಿ ವಿ ವೆಂಕಟೇಶ್, ನರಸಿಂಹನಹಳ್ಳಿ, ಗಂಗರಾಜು, ಅರವಿಂದ, ಸತ್ಯನಾರಾಯಣಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದಂತ ನಂಜಮ್ಮ ನರಸಿಂಹಮೂರ್ತಿ, ಪುಟ್ಟರಾಜು, ಮುನಿರಾಜು, ಪುರುಷೋತ್ತಮ್, ಉಪಸ್ಥಿತರಿದ್ದರು