i
ಮಾರ್ಚ್-26 ರಿಂದ 28ರವರೆಗೆ ರಂಗಹಬ್ಬ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ನಗರದ ಹವ್ಯಾಸಿ ರಂಗತಂಡಗಳ ಒಕ್ಕೂಟವಾದ ಕಲಾವಿದರು ಹವ್ಯಾಸಿ ರಂಗತಂಡಗಳ ಕಲಾವಿದರ ಸಂಘವು ಕುವೆಂಪು ರಂಗಮಂದಿರದಲ್ಲಿ ೨೦೨೪ರ ಮಾರ್ಚ್ ೨೬ರಿಂದ ೨೮ರ ವರೆಗೆ ಮೂರು ದಿನಗಳ ಶಿವಮೊಗ್ಗ ರಂಗಹಬ್ಬ ಎಂಬ ಹೊಸ ನಾಟಕಗಳ ಉತನವನ್ನು ಆಯೋಜಿಸಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಂಘಂಟನೆಯ ಅಧ್ಯಕ್ಷ ಕಾಂತೇಶ್ ಕದರಮಂಡಲಗಿ ಮತ್ತು ಪ್ರ. ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್, ಈ ನಾಟಕೋತ್ಸವದಲ್ಲಿ ಮೊದಲ ದಿನ ಮಾರ್ಚ್ ೨೬ರಂದು ಸಂಜೆ ೬.೪೫ಕ್ಕೆ ಸಹ್ಯಾದ್ರಿ ಕಲಾ ತಂಡವು ನಾ. ಶ್ರೀನಿವಾಸ್ ಅವರು ರಚಿಸಿರುವ ಗಾಂಧಿಯ ಕನ್ನಡಕ ನಾಟಕವನ್ನು ಡಾ.ಲವ ಜಿ.ಆರ್. ನಿರ್ದೇಶನದಲ್ಲಿ ಅಭಿನಯಿಸಲಿದೆ ಎಂದರು.
ಮಾರ್ಚ್ ೨೭ರಂದು ಸಂಜೆ ೬.೪೫ಕ್ಕೆ ರಂಗಬೆಳಕು ತಂಡವು ಶಿವಕುಮಾರ್ ಮಾವಲಿ ಅವರ ಪ್ರೇಮಪತ್ರದ ಆಫೀಸು ಮತ್ತು ಇತರೆ ಕತೆಗಳು ಹಾಗೂ ಶೇಕ್ಸ್ಪಿಯ ಕೃತಿ ಆಧರಿಸಿದ ಒಲವಿನ ಜಂಕ್ಷನ್ ನಾಟಕವನ್ನು ಅಜಯ್ ನೀನಾಸಂ ಅವರ ನಿರ್ದೇಶನದಲ್ಲಿ ಅಭಿನಯಿಸಲಿದೆ. ಮಾರ್ಚ್ ೨೮ರಂದು ಸಂಜೆ ೬.೪೫ಕ್ಕೆ ಹೊಂಗಿರಣ ರಂಗತಂಡವು ಡಾ. ಸಾಸ್ವೆಹಳ್ಳಿ ಸತೀಶ್ ಅವರ ನಿರ್ದೇಶನದಲ್ಲಿ ಮಹಿಳಾ ಭಾರತ ನಾಟಕ ಪ್ರದರ್ಶಿಸಲಿದೆ. ಈ ನಾಟಕದ ಫ್ರೆಂಚ್ ಮೂಲ ಕೆ. ಮಾಧವನ್ ಅವರದ್ದಾಗಿದ್ದು, ಕನ್ನಡಕ್ಕೆ ಅಭಿಲಾಷಾ ಎಸ್. ಅನುವಾದಿಸಿದ್ದಾರೆ ಎಂದು ಮಾಹಿತಿ ನೀಡಿದರು.
ರಂಗಂಭೂಮಿ ದಿನಾಚರಣೆ ಪ್ರಯುಕ್ತ ರಂಗಗೀತೆಗಳ ಗಾಯನ ಕಾರ್ಯಕ್ರಮವೂ ಇರುತ್ತದೆ. ಒಂದು ನಾಟಕಕ್ಕೆ ಒಬ್ಬರಿಗೆ ಪ್ರವೇಶ ದರ ರೂ. ೫೦ ನಿಗದಿ ಮಡಲಾಗಿದೆ ಎಂದರು.