i
ಮಾ.28ರಂದು ಸುವರ್ಣ ಗಂಗೋತ್ರಿಯ ಪ್ರಥಮ ವರ್ಷದ ಸಂಸ್ಥಾಪನಾ ದಿನಾಚರಣೆ…
ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ಚಾಮರಾಜನಗರ ವಿಶ್ವವಿದ್ಯಾನಿಲಯದ ನಿಜಗುಣ ಸಭಾಂಗಣದಲ್ಲಿ ಸುವರ್ಣ ಗಂಗೋತ್ರಿಯ ಪ್ರಥಮ ವರ್ಷದ ಸಂಸ್ಥಾಪನಾ ದಿನಾಚರಣೆಯನ್ನು ಮಾರ್ಚ್-28 ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲ ಸಚಿವ ಪ್ರೊ.ಪಿ.ಮಾದೇಶ್ ತಿಳಿಸಿದ್ದಾರೆ.ಪ್ರಥಮ ವರ್ಷದ ಸಂಸ್ಥಾಪನಾ ದಿನಾಚರಣೆ ಉದ್ಘಾಟನೆಯನ್ನು ವಿಶ್ರಾಂತ ಕುಲಪತಿ ಪ್ರೊ. ಪಿ. ವೆಂಕಟರಾಮಯ್ಯ ಮಾಡಲಿದ್ದಾರೆ.ಚಾಮ ರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ಆರ್ ಗಂಗಾಧರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನಿಕಟಪೂರ್ವ ಡೀನ್ ಪ್ರೊ. ಚಂಬಿ ಪುರಾಣಿಕ್ ಭಾಗವಹಿಸಲಿದ್ದಾರೆ. ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಅವರು ತಿಳಿಸಿದ್ದಾರೆ.