i
ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಟಿ.ಶೇಖರ್ ಅವಿರೋಧ ಆಯ್ಕೆ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ತುಮಕೂರು (ಪಿ.ಎಲ್.ಡಿ. ಬ್ಯಾಂಕ್)ನ ಅಧ್ಯಕ್ಷ ಸ್ಥಾನದ ಚುನಾವಣೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ತುಮಕೂರು ನಗರದ ಹೆಸರಾಂತ ವಕೀಲರಾದ ಟಿ.ಶೇಖರ್ ಅವರು ಸ್ವರ್ಧಿಸಿದ್ದು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ನೂತನ ಅಧ್ಯಕ್ಷರಿಗೆ ಶಾಸಕರುಗಳಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್ ಗೌಡ, ಲೋಕಸಭಾ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ, ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಕೆಂಪರಾಜಯ್ಯ,ಪ್ರಧಾನ ಕಾರ್ಯದರ್ಶಿ ಆರ್.ತಿಪ್ಪೇಸ್ವಾಮಿ, ಜಂಟಿ ಕಾರ್ಯದರ್ಶಿ ಸಿ.ಪಾಲಾಕ್ಷಯ್ಯ, ವೀರಣ್ಣ, ಹಿರಿಯ ಮತ್ತು ಕಿರಿಯ ವಕೀಲರುಗಳು ಮತ್ತು ಇತರರು ಶುಭಾಶಯಗಳನ್ನು ಕೋರಿದರು.