i
ಸೋಷಿಯಲ್ ಮೀಡಿಯಾ ಜಿಲ್ಲಾಧ್ಯಕ್ಷರಾಗಿ ಪ್ರವೀಣ್ ನೇಮಕ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಶಿವಮೊಗ್ಗ ಸೋಷಿಯಲ್ ಮೀಡಿಯಾ ಜಿಲ್ಲಾಧ್ಯಕ್ಷರಾಗಿ ಪ್ರವೀಣ್ ಕುಮಾರ್ ರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಸೋಷಿಯಲ್ ಮೀಡಿಯಾಗೆ ಸಮಿತಿ ರಚಿಸುವ ಮೂಲಕ ಆಕ್ಟೀವ್ ಮಾಡಿದ್ದಾರೆ. ಸಮಿತಿಯಲ್ಲಿ ಒಟ್ಟು 10 ಸ್ಥಾನ ರಚಿಸಿಲಾಗಿದೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಸಮಿತಿಗೆ ಜಿಲ್ಲಾಧ್ಯಕ್ಷರಾಗಿ ಎನ್.ಡಿ.ಪ್ರವೀಣ್ ಕುಮಾರ್ ನೇಮಕವಾಗಿದ್ದು, ಉಪಾಧ್ಯಕ್ಷರಾಗಿ ಆಕಾಶ್ ಕೆ.ಜಿ ಹಾಗು ಧನುಷ್ ಎಂ ರವರನ್ನು ನೇಮಿಸಲಾಗಿದೆ. ಉಳಿದ ಏಳು ಸ್ಥಾನಗಳಿಗೆ ಪ್ರಧಾನ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಿಲಾಗಿದೆ.
ಸೂಡಾ ಹಾಗೂ ಹಾಲಿ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ಸೋಷಿಯಲ್ ಪೇಜ್ ಗಳನ್ನು ನೋಡಿಕೊಳ್ಳುತ್ತಿರುವ ಪ್ರವೀಣ್ ಕಳೆದ ಮೂರು ದಶಕಗಳಿಂದ ಪಕ್ಷದಲ್ಲಿ ಯೂಥ್ ಕಾಂಗ್ರೆಸ್ ಸೇರಿದಂತೆ ಹಲವಾರು ವಿಭಾಗಗಳಲ್ಲಿ ಸೇವೆ ಸಲ್ಲಿಸಿ ನಿಷ್ಠಾವಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ.
ಜಿಲ್ಲೆಯ ಕಾಂಗ್ರೆಸ್ ಪಕ್ಷದ ಒಟ್ಟಾರೆ ಚಟುವಟಿಕೆಗಳನ್ನು ಸಾಮಾಜಿಕ ತಾಣಗಳಲ್ಲಿ ಬಿತ್ತರಿಸುವ ಜವಾಬ್ದಾರಿ ಪ್ರವೀಣ್ ಹೆಗಲೇರಿದೆ ತಮಗೆ ಸಿಕ್ಕ ಅವಕಾಶವನ್ನು ಸಮರ್ಥವಾಗಿ ನಿಭಾಯಿಸುವುದಾಗಿ ಪ್ರವೀಣ್ ಹೇಳಿಕೆ ನೀಡಿದ್ದಾರೆ.