i
ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಮಾಜಿ ಸಚಿವರ ವಿರುದ್ಧ ಕಾರ್ಯಕರ್ತರ ಅಕ್ರೋಶ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಾಜಿ ಸಚಿವರಾದ ಡಾ.ಕೆ.ಸುಧಾಕರ್ ರವರಿಗೆ ಸಿಕ್ಕಿದೆ, ಅಧಿಕೃತ ಟಿಕೆಟ್ ಘೋಷಣೆಯಾದ ತಕ್ಷಣವೇ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ, ದೊಡ್ಡಬಳ್ಳಾಪುರದ ಜಿಲ್ಲಾ ಬಿಜೆಪಿ ಕಛೇರಿಗೆ ಭೇಟಿ ನೀಡಿ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ಈ ವೇಳೆ ಕಾರ್ಯಕರ್ತರು ಡಾ.ಕೆ.ಸುಧಾಕರ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು, ಸಭೆಯಲ್ಲಿನ ಗೊಂದಲಕ್ಕೆ ಪ್ರತಿಕ್ರಿಯೆ ನೀಡಿದ ಮುಖಂಡರು ಇದು ಕುಟುಂಬದೊಳಗಿನ ಭಿನ್ನಾಭಿಪ್ರಾಯ ಅಷ್ಟೇ ಎಂದರು.
ಕಾರ್ಯಕರ್ತರ ಅಕ್ರೋಶಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ರವರು, ಕುಟುಂಬದಂತ್ತಿರುವ ಬಿಜೆಪಿ ಪಕ್ಷದಲ್ಲಿ ಕಾರ್ಯಕರ್ತರೆಂದಿಗೆ ಸಂವಾದ ಸಭೆಯನ್ನ ನಡೆಸಲಾಗಿದ್ದು, ಈ ವೇಳೆ ಕಾರ್ಯಕರ್ತರು ಕುಂದುಕೊರತೆಗಳ ಬಗ್ಗೆ ಮಾತನಾಡುವುದು, ತಮ್ಮ ಅಹವಾಲುಗಳನ್ನ ಸಲ್ಲಿಸುವುದು ಸರ್ವೇ ಸಾಮಾನ್ಯ ಎಂದರು.
ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ, ಸ್ಥಳೀಯ ಶಾಸಕರ ಬೆಂಬಲ ಕಾರ್ಯಕರ್ತರ ಶ್ರಮದ ವಿಶ್ವಾಸವಿದೆ. ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ ಎಂದರು.
ಬಿಜೆಪಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸ್ಥಳೀಯ ಶಾಸಕ ಧೀರಜ್ ಮುನಿರಾಜು ಮಾತನಾಡಿ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ, ಸಾವಿರಾರು ಕಾರ್ಯಕರ್ತರಲ್ಲಿ ಕೆಲ ಕುಂದುಕೊರತೆಗಳು ಇರುವುದು ಸಹಜ. ಕಾರ್ಯಕರ್ತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಕೇಂದ್ರದ ವರಿಷ್ಠರು ಹಾಗೂ ರಾಜ್ಯ ನಾಯಕರು ಸೂಚಿಸಿರುವ ಅಭ್ಯರ್ಥಿಯ ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗಾಗಿ ಸರ್ವರಿಗೂ ಒಮ್ಮತದ ಶ್ರಮಿಸಲಿದ್ದೇವೆ ಅತ್ಯಧಿಕ ಮತಗಳ ಅಂತರದಿಂದ ಡಾಕ್ಟರ್ ಕೆ ಸುಧಾಕರ್ ಅವರನ್ನು ಲೋಕಸಭಾ ಸದಸ್ಯರಾಗಿ ಆಯ್ಕೆ ಮಾಡುವುದೇ ನಮ್ಮ ಮುಖ್ಯ ಉದ್ದೇಶ ಎಂದರು.
ಈ ಸಂದರ್ಭದಲ್ಲಿ ಸ್ಥಳೀಯ ಪಕ್ಷದ ಜಿಲ್ಲಾಧ್ಯಕ್ಷ ರಾಮಕೃಷ್ಣಯ್ಯ, ತಾಲೂಕು ಅಧ್ಯಕ್ಷ ನಾಗೇಶ್, ಮುಖಂಡರಾದ ಪುಷ್ಪ ಶಂಕರ್, ಬಂತಿ ವೆಂಕಟೇಶ್, ವಾಣಿ ನಂದಕುಮಾರ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಮುಖಂಡರು ಉಪಸ್ಥಿರಿದ್ದರು.