i
ನ್ಯಾಯ ಬೆಲೆ ಅಂಗಡಿಗಳಲ್ಲಿ ನಿಯಮ ಪಾಲಿಸದಿದ್ದಲ್ಲಿ ಕಾನೂನು ಕ್ರಮ-ಕೆ.ಹೆಚ್.ಮುನಿಯಪ್ಪ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸರ್ಕಾರಿ ನ್ಯಾಯಬೆಲೆ ಅಂಗಡಿಗಳಲ್ಲಿ ವೇಳಾಪಟ್ಟಿಯನ್ನ ಹಾಕಿರ ಬೇಕು, ಕಾರ್ಯನಿರ್ವಹಿಸುವು ಸಮಯ ಮತ್ತು ದಿನವನ್ನ ವೇಳಾಪಟ್ಟಿಯಲ್ಲಿ ನಮೂದಿಸಿರ ಬೇಕು, ಸರ್ಕಾರಿ ನಿಯಮಗಳನ್ನ ಪಾಲನೆ ಮಾಡದ ನ್ಯಾಯ ಬೆಲೆ ಅಂಗಡಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದ್ದಾಗಿ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯ ಶ್ರೀಲಕ್ಷ್ಮೀ ವೆಂಕಟರಮಣಸ್ವಾಮಿ ರಥೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ತಿಂಗಳಲ್ಲಿ ಎರಡು ದಿನ ಮಾತ್ರ ಕಾರ್ಯನಿರ್ವಹಿಸುತ್ತವೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಎಂದಿನಂತೆ ನ್ಯಾಯಬೆಲೆ ಅಂಗಡಿಗಳು ಸರ್ಕಾರಿ ನಿಯಮಗಳ ಪ್ರಕಾರ ಕಾರ್ಯ ನಿರ್ವಹಿಸುತ್ತಿದ್ದು, ಅವುಗಳ ಕಾರ್ಯಶೈಲಿಯಲ್ಲಿ ಏರುಪೇರು ಇದ್ದಲ್ಲಿ ಅವುಗಳ ವಿರುದ್ಧ ಕ್ರಮ ತೆಗೆದು ಕೊಳ್ಳಲಾಗುವುದು.
ಸರ್ಕಾರದ ಆದೇಶದಲ್ಲಿ ಸ್ವಷ್ಟವಾಗಿ ತಿಳಿಸಲಾಗಿದೆ, ನ್ಯಾಯಬೆಲೆ ಅಂಗಡಿಗಳಲ್ಲಿ ವೇಳಾಪಟ್ಟಿಯನ್ನ ಹಾಕಿರ ಬೇಕು, ವೇಳಾಪಟ್ಟಿಯಲ್ಲಿ ಕಾರ್ಯನಿರ್ವಹಿಸುವ ಸಮಯ ಮತ್ತು ದಿನವನ್ನು ನಮೂದಿಸರ ಬೇಕು, ವೇಳಾಪಟ್ಟಿ ಬೋರ್ಡ್ ಗಳನ್ನ ಹಾಕದಿದ್ದಲ್ಲಿ ಅಂತಹ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದ್ದಾಗಿ ಹೇಳಿದರು.
ದೊಡ್ಡಬಳ್ಳಾಪುರದಲ್ಲಿ ಬಹುತೇಕ ನ್ಯಾಯಬೆಲೆ ಅಂಗಡಿಗಳು ತಿಂಗಳಲ್ಲಿ ಎರಡು ದಿನ ಮಾತ್ರ ಬಾಗಿಲು ತೆಗೆಯುತ್ತಿದ್ದವು, ಇದರಿಂದ ಪಡಿತರ ತೆಗೆದುಕೊಳ್ಳಲು ಸಾರ್ವಜನಿಕರು ಕೆಲಸಕ್ಕೆ ರಜೆ ಹಾಕಿ, ದಿನಗಟ್ಟಲೆ ಕಾದು ರೇಷನ್ ತೆಗೆದು ಕೊಳ್ಳ ಬೇಕಿತ್ತು, ಇದರು ವಿರುದ್ಧ ಯುವ ಸಂಚಲನ ತಂಡ ಮತ್ತು ಸಾರ್ವಜನಿಕರು ಪ್ರತಿಭಟನೆಯನ್ನ ನಡೆಸಿದರು ಮತ್ತು ಜನರಲ್ಲಿ ಜಾಗೃತಿಯನ್ನ ಮೂಡಿಸಿದ್ದರು.