i
ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ-ಡಿಸಿ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ವೇಳಾಪಟ್ಟಿಯನ್ವಯ ಮಾರ್ಚ್ ೨೮ ರಿಂದ ಏಪ್ರಿಲ್ ೪ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ಓರ್ವ ಅಭ್ಯರ್ಥಿಗೆ ಗರಿಷ್ಠ ೪ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ನಾಮಪತ್ರವನ್ನು ಮಾರ್ಚ್ ೨೮ ರಿಂದ ಏಪ್ರಿಲ್ ೪ರವರೆಗೆ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸ್ವೀಕರಿಸಲಾಗುವುದು. ಅಭ್ಯರ್ಥಿಗಳಿಂದ ಸಾರ್ವತ್ರಿಕ ರಜಾ ದಿನಗಳಾದ ಮಾರ್ಚ್ ೨೯ರ ಗುಡ್ ಫ್ರೈಡೆ ಹಾಗೂ ಮಾ.೩೧ರ ಭಾನುವಾರ ಹೊರತುಪಡಿಸಿ ಉಳಿದ ದಿನಗಳಂದು ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ನಾಮಪತ್ರಗಳನ್ನು ತೆಗೆದುಕೊಳ್ಳಲಾಗುವುದು. ನಾಮಪತ್ರ ಸಲ್ಲಿಸುವ ಅಭ್ಯರ್ಥಿಯ ಹೆಸರು ಯಾವುದೇ ಲೋಕಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರಬೇಕು. ಅಭ್ಯರ್ಥಿಯು ೨೫ ವ? ವಯೋಮಿತಿಯವರಾಗಿದ್ದು, ಭಾರತೀಯ ನಾಗರೀಕರಾಗಿರಬೇಕು. ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಓರ್ವ ಸೂಚಕರನ್ನು ಹೊಂದಲು ಅವಕಾಶವಿದ್ದು, ಈ ಸೂಚಕರು ಸಂಬಂಧಪಟ್ಟ ಲೋಕಸಭಾ ಕ್ಷೇತ್ರದ ಮತದಾರರಾಗಿರಬೇಕು. ನೋಂದಾಯಿತ ರಾಜಕೀಯ ಪಕ್ಷಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳಿಗೆ ೧೦ ಜನ ಸೂಚಕರು ಕಡ್ಡಾಯವಾಗಿ ಇರಬೇಕು. ಎಲ್ಲಾ ಸೂಚಕರು ಸಂಬಂಧಪಟ್ಟ ಲೋಕಸಭಾ ಕ್ಷೇತ್ರದ ಮತದಾರರಾಗಿರಬೇಕು. ಓರ್ವ ಅಭ್ಯರ್ಥಿಯು ಗರಿ? ೪ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದ್ದು, ಒಂದು ನಾಮಪತ್ರದ ಜೊತೆ ಪೂರ್ಣ ಪ್ರಮಾಣದ ದಾಖಲಾತಿ ನೀಡಿದಲ್ಲಿ ಉಳಿಕೆ ನಾಮಪತ್ರಗಳಿಗೆ ಕೇವಲ ನಾಮಪತ್ರ ಮಾತ್ರ ಸಲ್ಲಿಸಿದರೆ ಸಾಕು. ನಾಮಪತ್ರ ಸ್ವೀಕರಿಸುವ ಕೋಣೆಯಲ್ಲಿ ಒಂದು ಸಿ.ಸಿ.ಟಿ.ವಿ., ಒಂದು ಗೋಡೆ ಗಡಿಯಾರ(ಸರಿಯಾದ ವೇಳೆ ತೋರಿಸುವುದು)ವನ್ನು ಅಳವಡಿಸಲಾಗುವುದಲ್ಲದೆ ಹಾಗೂ ಓರ್ವ ವಿಡಿಯೋಗ್ರಾಫರ್ ಅನ್ನು ನಿಯೋಜಿಸಲಾಗುವುದು. ನಾಮಪತ್ರವನ್ನು ಅಭ್ಯರ್ಥಿಗಳು ಆನ್ಲೈನ್ https://suvidha.eci.gov.in ಮೂಲಕವೂ ಸಹ ಸಲ್ಲಿಸಬಹುದು. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಒಬ್ಬ ಅಭ್ಯರ್ಥಿಯ ಜೊತೆ ೪ ಜನಕ್ಕೆ ಮಾತ್ರ ಚುನಾವಣಾಧಿಕಾರಿಗಳ ಕೊಠಡಿಯ ಒಳಗೆ ಪ್ರವೇಶಾವಕಾಶವಿದ್ದು, ನಾಮಪತ್ರವನ್ನು ಅಭ್ಯರ್ಥಿ ಅಥವಾ ಸೂಚಕ ಸಲ್ಲಿಸಲು ಅವಕಾಶವಿರುತ್ತದೆ. ನಾಮಪತ್ರ ಸಲ್ಲಿಸಿದ ನಂತರ ಅಭ್ಯರ್ಥಿಯು ಪ್ರಮಾಣ ಸ್ವೀಕರಿಸಬೇಕು. ಅಭ್ಯರ್ಥಿಯು ಪ್ರಮಾಣವನ್ನು ಸ್ವೀಕರಿಸಲು ಹಾಗೂ ಮತದಾರರ ಪಟ್ಟಿಯ ದೃಢೀಕೃತ ನಕಲು ಸಲ್ಲಿಸಲು ಏಪ್ರಿಲ್ ೪ರವರೆಗೆ ಅವಕಾಶವಿರುತ್ತದೆ. ಠೇವಣಿ ಹಣವನ್ನು ಸಾಮಾನ್ಯ ಅಭ್ಯರ್ಥಿಗೆ ೨೫,೦೦೦/- ರೂ., ಪ.ಜಾತಿ/ಪ.ಪಂಗಡದ ಅಭ್ಯರ್ಥಿಗೆ ೧೨,೫೦೦/- ರೂ.ಗಳಿಗೆ ನಿಗಧಿಪಡಿಸಲಾಗಿದೆ. ಇದನ್ನು ಚುನಾವಣಾಧಿಕಾರಿಗಳ ಕಛೇರಿಯಲ್ಲಿ ನಗದಾಗಿ ನೀಡಿ ರಸೀದಿ ಪಡೆಯಬೇಕು. ಈ ರಸೀದಿ ಹಾಗೂ ಅಭ್ಯರ್ಥಿಯ ಜಾತಿ ಪ್ರಮಾಣ ಪತ್ರವನ್ನು ನಾಮಪತ್ರದೊಂದಿಗೆ ಲಗತ್ತಿಸಿ ಸಲ್ಲಿಸಬೇಕು. ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳು ಅಭ್ಯರ್ಥಿಗಳು ಫಾರಂ-ಎ ಮತ್ತು ಫಾರಂ-ಬಿಗಳನ್ನು ನಾಮಪತ್ರ ಸಲ್ಲಿಕೆಯ ಕೊನೆಯ ದಿನ ಅಂದರೆ ಏಪ್ರಿಲ್ ೪ರಂದು ಮಧ್ಯಾಹ್ನ ೩ ಗಂಟೆಯ ಒಳಗಾಗಿ ಸಲ್ಲಿಸಬೇಕು. ನಾಮಪತ್ರದ ಜೊತೆ ಇತ್ತೀಚಿನ ಅಂದರೆ ಮೂರು ತಿಂಗಳೊಳಗಿನ ಭಾವಚಿತ್ರವನ್ನು ಲಗತ್ತಿಸಬೇಕು. ಭಾವಚಿತ್ರವು ೨+೨.೫ ಸೆ.ಮೀ ಇದ್ದು, ಹಿಂಭಾಗದಲ್ಲಿ ಬಿಳಿ ಬಣ್ಣದ್ದಾಗಿರಬೇಕು. ಕ್ಯಾಪ್, ಹ್ಯಾಟ್, ಡಾರ್ಕ್ ಸನ್ ಗ್ಲಾಸಸ್, ಯೂನಿಫಾರಂ ಇರುವ ಭಾವಚಿತ್ರಗಳಿಗೆ ಅವಕಾಶವಿರುವುದಿಲ್ಲ. ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಕ್ರಿಮಿನಲ್ ಮೊಕದ್ದಮೆ ಇದ್ದಲ್ಲಿ ಅದನ್ನು ಟಿ.ವಿ. ಮತ್ತು ದಿನಪತ್ರಿಕೆಗಳಲ್ಲಿ ಪ್ರಚುರಪಡಿಸಬೇಕು ಎಂದು ತಿಳಿಸಿದ್ದಾರೆ.