i
ತಾಲ್ಲೂಕು ವಿಸ್ತರಣಾಧಿಕಾರಿ ಕಛೇರಿ ಸ್ಥಳಾಂತರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯಲ್ಲಿಯ ಶ್ರೀ ರಾಮ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಚಿತ್ರದುರ್ಗ ಉಪವಿಭಾಗದ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸ್ಥಳಾಂತರಿಸಲಾಗಿದೆ.
ಏಪ್ರಿಲ್ 1 ರಿಂದ ನಗರದ ನ್ಯಾಷನಲ್ ಹೋಟೆಲ್ ಹತ್ತಿರದ ಸರಸ್ವತಿಪುರಂ 1ನೇ ಮುಖ್ಯ ರಸ್ತೆಯ, ಶ್ರೀ ಆಂಜನೇಯ ನಿಲಯದಲ್ಲಿ ಕಚೇರಿ ಕಾರ್ಯ ನಿರ್ವಹಿಸಲಿದೆ. ಸಾರ್ವಜನಿಕರು ಸ್ಥಳಾಂತರಗೊಂಡಿರುವ ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಗತ್ಯ ಸೇವೆ, ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ತಾಲ್ಲೂಕು ವಿಸ್ತರಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.