i
ಜಿಲ್ಲೆಯಲ್ಲಿ ಎರಡು ಕಡೆ ಲೋಕಾಯುಕ್ತ ದಾಳಿ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಬಿಬಿಎಂಪಿಯಲ್ಲಿ ಚೀಫ್ ಇಂಜಿನಿಯರ್ ಆಗಿರುವ , ಇಲ್ಲಿನ ಗಾಂಧಿ ಬಜಾರ್ ನಲ್ಲಿ ಆಸ್ತಿ ಹೊಂದಿರುವ ವ್ಯಕ್ತಿಯ ಪತ್ನಿಯ ಮನೆಗೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಪತ್ನಿಯ ಮನೆ ಮತ್ತು ಕಾಂಪ್ಲೆಕ್ಸ್ ಮೇಲೆ ದಾಳಿ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗದ ಗಾಂಧಿ ಬಜಾರ್ನ ಕರಿದೇವರಕೇರಿಯಲ್ಲಿರುವ ಕಾಂಪ್ಲೆಕ್ಸ್ ಒಂದರ ಮೇಲೆ ದಾಳಿ ನಡೆದಿದೆ.
ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೊಂದೆಡೆ ಹೊಸನಗರ ತಾಲ್ಲೂಕಿನ ಮಳಲಿ ಗ್ರಾಮದಲ್ಲಿರುವ ತೋಟದ ಮನೆಯೊಂದರ ಮೇಲೆಯು ಅಧಿಕಾರಿಗಳು ದಾಳಿ ನಡೆಸಿದ್ದು, ಕಾರವಾರದ ಅಬಕಾರಿ ಅಧಿಕಾರಿಯೊಬ್ಬರಿಗೆ ಸೇರಿದ ಆಸ್ತಿ ಇದಾಗಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಅಧಿಕಾರಿಗಳು ಕಾರ್ಯಾಚರಣೆ ಮುಗಿದ ಬಳಿಕ ಮಾಹಿತಿ ನೀಡುವ ಸಾಧ್ಯತೆ ಇದೆ.