i
ಸಿದ್ದರಾಮಯ್ಯ ವಿರುದ್ಧ ದೇವೇಗೌಡರ ವಾಗ್ದಾಳಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲೋಕಸಭಾ ಚುನಾವಣಾ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದ ಜಾತ್ಯತೀತ ಜನತಾದಳ (ಜೆಡಿಎಸ್) ರಾಷ್ಟ್ರೀಯ ಅಧ್ಯಕ್ಷ ಎಚ್ಡಿ ದೆವೇಗೌಡ ಅವರು, ಮಂಡ್ಯ ಜೆಡಿಎಸ್ ಅಭ್ಯರ್ಥಿ ಹಾಗೂ ಮೈಸೂರು ಮತ್ತು ಚಾಮರಾಜನಗರ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವಂತೆ ಮುಖಂಡರಲ್ಲಿ ಮನವಿ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು” ಎಂದು ಗುಡುಗಿದ್ದಾರೆ.
ಜೆಡಿಎಸ್-ಬಿಜೆಪಿ ಸಮನ್ವಯ ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡರಿಗೆ ನಿರ್ದೇಶನ ನೀಡಿದರು.