i
ಜಾತ್ರೆಯಲ್ಲಿ ಪೊಲೀಸರ ಮೇಲೆ ಹಲ್ಲೆ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಜಾತ್ರೆಯಲ್ಲಿ ಪೊಲೀಸರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿರುವ ಘಟನೆ ಆನಂದಪುರ ಸಮೀಪದ ಗೌತಮಪುರದಲ್ಲಿ ನಡೆದಿದೆ.
ಗೌತಮಪುರದಲ್ಲಿ ಮಾರಿಕಾಂಬಾ ಜಾತ್ರೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಡಿಆರ್ ಪೊಲೀಸ್ ಸಿಬ್ಬಂದಿ ಒಬ್ಬರು ಬಂದೋಬಸ್ತ್ ನಲ್ಲಿದ್ದರು. ಅವರ ಸಮ್ಮುಖದಲ್ಲಿ ಗುಂಪೊAದು ಗಲಾಟೆ ಮಾಡುತ್ತಿದ್ದಾಗ ಅದನ್ನು ಬಿಡಿಸಲು ಹೋಗಿದ್ದ ಸಿಬ್ಬಂದಿಯ ಮೇಲೆ ಯುವಕರು ಹಲ್ಲೆ ಮಾಡಿದ್ದಾರೆ. ಪೊಲೀಸ್ ಸಮವಸ್ತ್ರವನ್ನು ಹರಿದುಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ಸಿಬ್ಬಂದಿಯನ್ನು ನಿಂದಿಸಿದ್ದಲ್ಲದೆ, ಶಾಸಕರೊಬ್ಬರ ಬೆಂಬಲಿಗರು ಎಂದು ಹೇಳಿಕೊಂಡಿರುವ ಯುವಕರ ಗುಂಪು ತಮ್ಮ ತಂಟೆಗೆ ಬಂದರೆ ಹುಷಾರ್ ಎಂದು ಪೊಲೀಸರನ್ನು ಹೆದರಿಸಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.
ಹಲ್ಲೆ ಮಾಡುತ್ತಿರುವ ದೃಶ್ಯಗಳು ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಸ್ಥಳೀಯರು ಪೊಲೀಸರನ್ನು ಗುಂಪಿನ ಯುವಕರಿಂದ ಬಿಡಿಸುತ್ತಿರುವ ದೃಶ್ಯಗಳಿದ್ದು, ಹಲ್ಲೆ ಮಾಡುತ್ತಿರುವ ಯುವಕನ ಚಹರೆಯು ರೆಕಾರ್ಡ್ ಆಗಿದೆ. ಈ ಸಂಬಂಧ ಓರ್ವನನ್ನು ವಶಕ್ಕೆ ಪಡೆದಿರುವ ಪೊಲೀಸರು ಇನ್ನೊಬ್ಬನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.