![](https://www.chandravallinews.com/wp-content/uploads/2024/03/WhatsApp-Image-2024-03-30-at-11.45.38-PM-1-1024x698.jpeg)
i
ಜೆಡಿಎಸ್-ಬಿಜೆಪಿ ಮೈತ್ರಿಕೂಟಕ್ಕೆ 28 ಕ್ಷೇತ್ರಗಳಲ್ಲಿ ಗೆಲುವು ಖಚಿತ-ಅಭ್ಯರ್ಥಿ ಗೋವಿಂದ ಕಾರಜೋಳ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿಕೂಟವು ೨೮ ಕ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದಾಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಗೋವಿಂದ ಕಾರಜೋಳ ಚುನಾವಣೆಯ ಫಲಿತಾಂಶದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.ಬಿಜೆಪಿ ಅಭ್ಯರ್ಥಿ ಎಂಬುದಾಗಿ ಅಧಿಕೃತವಾಗಿ ಘೋಷಣೆಯಾದ ನಂತರ ಜಿಲ್ಲಾ ಕೇಂದ್ರಕ್ಕೆ ತೆರಳುವ ಮೊದಲು, ಮೊದಲ ಬಾರಿಗೆ ಶುಕ್ರವಾರ ಸಂಜೆ ಹಿರಿಯೂರು ನಗರಕ್ಕೆ ಭೇಟಿ ನೀಡಿ ಶ್ರೀ ತೇರುಮಲ್ಲೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಮೊದಲ ಬಾರಿಗೆ ಜೆಡಿಎಸ್ ಜೊತೆ ಬಿಜೆಪಿ ಅಧಿಕೃತವಾಗಿ ಮೈತ್ರಿ ಮಾಡಿಕೊಂಡಿದ್ದರಿಂದ ಎರಡೂ ಪಕ್ಷದ ಕಾರ್ಯಕರ್ತರು ಒಟ್ಟಾಗಿ ೨೮ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಹೀಗಾಗಿ ಹಿಂದಿನ ಲೋಕಸಭಾ ಚುನಾವಣೆಗಿಂತ ಈ ಬಾರಿ ನಮ್ಮ ಶಕ್ತಿ ವೃದ್ಧಿಸಿದೆ. ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲಿದ್ದಾರೆ ಎಂಬುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಎರಡು ಪಕ್ಷದ ಕಾರ್ಯಕರ್ತರು ಒಗ್ಗಾಟ್ಟಾಗಿ , ಒಂದಾಗಿ ಒಂದೇ ತಾಯಿ ಮಕ್ಕಳಂತೆ ಕೆಲಸ ಮಾಡುತ್ತಿದ್ದೇವೆ. ಇದರಿಂದ ನಮ್ಮ ಪಕ್ಷದ ಶಕ್ತಿ ಗಟ್ಟಿಯಾಗಿದೆ. ಇದರಿಂದ ೨೮ ಕ್ಷೇತ್ರದಲ್ಲೂ ಗೆದ್ದು ಪ್ರಧಾನಿ ಮೋದಿ ಅವರ ಕೈ ಬಲಪಡಿಸುತ್ತೇವೆ ಎಂಬುದಾಗಿ ಅವರು ತಿಳಿಸಿದರು. ಹೊರಗಿನವರಿಗೆ ಟಿಕೆಟ್ ನೀಡುವುದರಿಂದ ತಮ್ಮ ವಿರುದ್ಧ ಜಿಲ್ಲೆಯಲ್ಲಿ ಬಂಡಾಯ ಎದ್ದಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ನನಗೆ ವರಿ?ರು ಟಿಕೆಟ್ ನೀಡಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಬಂಡಾಯ ಇಲ್ಲ.ಒಂದೆರಡು ದಿನಗಳಲ್ಲಿ ಎಲ್ಲವೂ ಸರಿ ಹೋಗಲಿದೆ ಎಂಬುದಾಗಿ ಅವರು ಹೇಳಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮುಖಂಡರಾದ ಲಿಂಗಮೂರ್ತಿ, ಬಿಜೆಪಿ ಮುಖಂಡರಾದ ಎನ್.ಆರ್.ಲಕ್ಷ್ಮಿಕಾಂತ್, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ, ಮಾಜಿ ಜಿಲ್ಲಾಧ್ಯಕ್ಷ ಡಿ.ಯಶೋಧರ, ಬಿಜೆಪಿ ತಾಲ್ಲೂಕು ಅಧ್ಯಕ್ಷ ವಿಶ್ವನಾಥ್, ಎಂ.ಎಸ್.ರಾಘವೇಂದ್ರ, ಎಂ.ವಿ. ಹರ್ಷ, ಚಂದ್ರಹಾಸ, ಕೆ.ಶಂಕರಮೂರ್ತಿ, ಜಯಣ್ಣ, ವೆಂಕಟೇಶ್, ಎಂ.ರವೀಂದ್ರಪ್ಪ, ಜೆ.ಜೆ.ಮಂಜುನಾಥ್, ಶಿವಶಂಕರ್, ವಕೀಲ ಸುರೇಶ್, ಶ್ರವಣಗೆರೆ ಹನುಮಂತರಾಯ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಹನುಮಂತರಾಯಪ್ಪ ಸೇರಿದಂತೆ ಎರಡು ಪಕ್ಷದ ಬಹುತೇಕ ಮುಖಂಡರು ಹಾಜರಿದ್ದರು.