i
ಕಾಂಗ್ರೆಸ್ ನತ್ತ ಮುಖ ಮಾಡಿದ ರಾಜ್ಯ ಬಿಜೆಪಿ ಯುವ ಘಟಕದ ಮಾಜಿ ಅಧ್ಯಕ್ಷ ಡಾ.ಸಂದೀಪ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಬಿಜೆಪಿ ರಾಜ್ಯ ಯುವ ಮೋರ್ಚಾ ನಿಕಟಪೂರ್ವ ಅಧ್ಯಕ್ಷ ಡಾ.ಸಂದೀಪ್ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಖ ಖಚಿತವಾಗಿದೆ.
ಡಾ.ಸಂದೀಪ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತುಕತೆಗಳು ನಡೆದಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಪಕ್ಷ ಸೇರ್ಪಡೆಯಾಗಲಿರುವ ಸಾಧ್ಯತೆ ಇದೆ.
ಪರಿಶಿಷ್ಟ ಜಾತಿಗೆ ಸೇರಿದ ಪ್ರಬಲ ನಾಯಕರಲ್ಲಿ ಒಬ್ಬರಾದ ಡಾ.ಸಂದೀಪ್ ಬಿಜೆಪಿಯಲ್ಲಿ ತಳಹಂತದಿಂದ ಹಿಡಿದು ಬಿಜೆಪಿ ಯುವ ಘಟಕದ ಅಧ್ಯಕ್ಷ ಸ್ಥಾನದವರೆಗೆ ಕ್ರಿಯಾಶೀಲವಾಗಿ ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಕಲೇಶಪುರ-ಆಲೂರು ಅಥವಾ ಆನೇಕಲ್ ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದರಲ್ಲಿ ಅವರನ್ನು ಸ್ಪರ್ಧೆಗೆ ಇಳಿಸುವುದಾಗಿ ಬಿಜೆಪಿ ಮತ್ತು ಆರೆಸ್ಸೆಸ್ನಾಯಕರು ಭರವಸೆ ನೀಡಿದ್ದರಾದರೂ ಕೊನೆ ಘಳಿಗೆಯಲ್ಲಿ ಟಿಕೆಟ್ ವಂಚಿತರಾಗಿದ್ದರು.
ಈ ಕುರಿತು ಮಾತನಾಡಿದ ಡಾ. ಸಂದೀಪ್, ಕಾಂಗ್ರೆಸ್ಸೇರ್ಪಡೆ ಬಗ್ಗೆ ಮಾತುಕತೆ ನಡೆಯುತ್ತಿದೆ. ಪ್ರಸ್ತುತ ವಿದ್ಯಮಾನವನ್ನು ನೋಡಿದಾಗ ಬಾಬಾ ಸಾಹೇಬರ ಸಂವಿಧಾನದ ಆಶಯ, ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಮಾರಕವಾಗಿರುವ ಹಿನ್ನೆಲೆ ಬಿಜೆಪಿ ತೊರೆಯುವ ನಿರ್ಧಾರಕ್ಕೆ ಬಂದಿದ್ದೆ, ಈ ಬಾರಿ ಟಿಕೆಟ್ಗೆ ಆಕಾಂಕ್ಷಿಯಾಗಿಲ್ಲ, ಕಳೆದ ಬಾರಿ ಆನೇಕಲ್ನಿಂದ ಟಿಕೆಟ್ನಿರೀಕ್ಷೆಯಲ್ಲಿದ್ದೆ, ಬಹುತೇಖ ಟಿಕೆಟ್ಸಿಗುತ್ತದೆ ಎಂದುಕೊಂಡಿದ್ದೆ, ಕಾರ್ಯಕರ್ತರಿಗೆ ಮನ್ನಣೆ, ಬೆಂಬಲ ನೀಡುವುದಿಲ್ಲ. ಇದು ಬೇರೆ ತರನೇ ಅಪ್ಪ-ಮಕ್ಕಳ ಪಕ್ಷವಾಗಿದೆ. ಕಳೆದ 10 ವರ್ಷಗಳಿಂದ ಬಿಜೆಪಿ-ಆರೆಸ್ಸೆಸ್ನಲ್ಲಿ ಸಕ್ರಿಯವಾಗದ್ದೆ, ಕಾಂಗ್ರೆಸ್ಸೇರ್ಪಡೆ ಬಗ್ಗೆ ಪ್ರಾಥಮಿಕವಾಗಿ ಮಾತುಕತೆ ನಡೆದಿದೆ. ಕಾಂಗ್ರೆಸ್ಸೇರ್ಪಡೆ ಬಹತೇಖ ಖಚಿತ ಎಂದು ಹೇಳಿದ್ದಾರೆ.