![](https://www.chandravallinews.com/wp-content/uploads/2024/04/WhatsApp-Image-2024-04-02-at-6.00.30-AM-1.jpeg)
i
ಜಿಲ್ಲೆಯಲ್ಲಿ ಮೂವರು ಅಭ್ಯರ್ಥಿಗಳಿಂದ ಐದು ನಾಮಪತ್ರ ಸಲ್ಲಿಕೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 01 ಸೋಮವಾರದಂದು ಮೂವರು ಅಭ್ಯರ್ಥಿಗಳಿಂದ ಐದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಗೋವಿಂದ ಕಾರಜೋಳ ಅವರು 2 ಬಾರಿ, ಸೋಷಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದಿಂದ ಸುಜಾತ ಡಿ ಅವರು 2 ಬಾರಿ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ನರಸಿಂಹರಾಜು ಸಿ.ಎನ್ ಅವರು 1 ಬಾರಿ ತಮ್ಮ ಉಮೇದುವಾರಿಕೆ ಪತ್ರವನ್ನು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಸಲ್ಲಿಸಿದರು.
ಈಗಾಗಲೇ ಮಾರ್ಚ್ 28 ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಏಪ್ರಿಲ್ 04 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.