i
ಬೈಕ್ ನಲ್ಲಿ ಬಂದು ವ್ಯಾನಿಟಿ ಬ್ಯಾಗ್ ಕಿತ್ತುಕೊಂಡು ಪರಾರಿಯಾದ ಯುವಕ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಎಲ್ ಬಿಎಸ್ ನಗರದಲ್ಲಿ ಮಹಿಳೆಯ ವ್ಯಾನಿಟಿ ಬ್ಯಾಗ್ ಕಿತ್ತಿಕೊಂಡು ಹೋಗಿರುವ ಘಟನೆ ನಡೆದಿದ್ದು, ಪ್ರಕರಣ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಗಾಂಧಿ ನಗರದಲ್ಲಿ ಪೂಜಾ ಸಾಮಾಗ್ರಿಗಳನ್ನು ಮಾರಾಟ ಮಾಡುವ ಅಂಗಡಿ ನಡೆಸುತ್ತಿರುವವರ ತಾಯಿ ಏ.5 ರಂದು ರಾತ್ರಿ ಪರಿಚಯಸ್ಥರ ಆಟೋದಲ್ಲಿ ಎಲ್ ಬಿಎಸ್ ನಗರಕ್ಕೆ ಬಂದಿದ್ದರು.
ಎಲ್ ಬಿಎಸ್ ನಗರದ ತಪೋಮಯದ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಅಡ್ಡಲಾಗಿ ಬಂದ ಬೈಕ್ ಸವಾರ ಮಹಿಳೆಯ ವ್ಯಾನಿಟಿ ಬ್ಯಾಗ್ ಕಸಿದುಕೊಂಡು ಹೋಗಿದ್ದಾನೆ.
ಪರ್ಸ್ ನಲ್ಲಿ ಬ್ಯಾಂಕ್ ಎಟಿಎಂ ಕಾರ್ಡ್, 10 ಸಾವಿರ ರೂ. ನಗದು ಹಾಗೂ ಮೊಬೈಲ್ ಕಳುವಾಗಿರುವ ಬಗ್ಗೆ ದೂರು ನೀಡಿದ್ದಾರೆ.