i
ಬೀಗರೂಟ ವಾಂತಿ ಬೇದಿ, ಡಿಎಚ್ಒ ಭೇಟಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹೊಸದುರ್ಗ ತಾಲ್ಲೂಕಿನ ಹಳೇ ಕುಂದೂರು ಗ್ರಾಮದಲ್ಲಿ ಈಚೆಗೆ ಮಾಂಸಹಾರಿ ಊಟ ಸೇವಿಸಿ ಜನರು ಅಸ್ವಸ್ಥ ಗೊಂಡ ಘಟನೆ ವರದಿಯಾಗಿತ್ತು. ಈ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಸೋಮವಾರ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತರ ಆರೋಗ್ಯ ವಿಚಾರಣೆ ನಡೆಸಿದರು.
ಅಸ್ವಸ್ಥಗೊಂಡ ಎಲ್ಲಾ ಜನರ ಆರೋಗ್ಯ ಸ್ಥಿರವಾಗಿದೆ. ಬಹಳಷ್ಟು ಜನರು ಗುಣಮುಖರಾಗಿದ್ದಾರೆ. ಸೋಮವಾರವು ಸಹ 3 ಜನರಲ್ಲಿ ಭೇದಿ ಜ್ಚರ, ಹೊಟ್ಟೆ ಮುರಿತ ನೋವು ಕಾಣಿಸಿಕೊಂಡಿದೆ. ಸಂಚಾರಿ ಆರೋಗ್ಯ ಚಿಕಿತ್ಸಾಲಯ ಗ್ರಾಮದಲ್ಲಿಯೇ ಬೀಡು ಬಿಟ್ಟಿದೆ. ತಾತ್ಕಾಲಿಕ ಚಿಕಿತ್ಸೆ ಘಟಕ ತೆರೆದು, ತಕ್ಷಣವೇ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ ಸಾಂಕ್ರಾಮಿಕ ರೋಗದ ಭೀತಿ ಹಿನ್ನಲೆಯಲ್ಲಿ ಆರೋಗ್ಯ ತಂಡ ಗ್ರಾಮದಲ್ಲಿ ಸರ್ವೇ ಕಾರ್ಯ ಮುಂದುವರಿಸಿದೆ.
ಈ ವೇಳೆ ಬಾಗೂರು ಆರೋಗ್ಯಾಧಿಕಾರಿ ಡಾ.ಪರುಶುರಾಮ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ವಿರೇಂದ್ರ ಪಾಟೀಲ್, ಆರ್.ಆರ್.ಟಿ ತಂಡದ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಪುನೀತ್, ಪಾಂಡು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.