i
ನಗರದಲ್ಲಿ ಮತದಾನ ಜಾಗೃತಿ ಜಾಥಾ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಲೋಕಸಭಾ ಚುನಾವಣೆ..2024ರ ಹಿನ್ನೆಲೆಯಲ್ಲಿ ನಗರಸಭೆ ಸ್ವೀಪ್ ಸಮಿತಿವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸ್ವೀಪ್ ಸಮಿತಿಯ ನಿರ್ದೇಶನದಂತೆ ನಗರಸಭಾ ವ್ಯಾಪ್ತಿಯ ಗ್ರಾಮೀಣ ಅಬ್ಯುದಯ ಸೇವಾ ಸಂಘ ಕಚೇರಿ, ಡಿ.. ಕ್ರಾಸ್ ಬಳಿಯ ರಾಜಕುಮಾರ್ ವೃತ್ತ ಹಾಗೂ ನಗರ ವ್ಯಾಪ್ತಿಯ ಹಲವು ವಾರ್ಡ್ಗಳಲ್ಲಿ ಸಾರ್ವಜನಿಕರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮತದಾನ ಜಾಗೃತಿ ಜಾಥಾ ವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮತದಾನದ ಪ್ರತಿಘ್ನ ವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಸಿಬ್ಬಂದಿ, ಸಂಘಟನೆಗಳ ಪ್ರಮುಖರು ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.