i
ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ, ದಳಪತಿಗಳಿಗೆ ಬಿಗ್ ಶಾಕ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲೋಕಸಭೆ ಚುನಾವಣೆ ಹೊತ್ತಿನಲ್ಲಿ ರಾಜಕೀಯ ನಾಯಕರ ಪ್ರಚಾರದ ಜೊತೆಗೆ ಪಕ್ಷಾಂತರ ಕೂಡ ಜೋರಾಗಿದೆ. ಕರ್ನಾಟಕ ರಾಜಕೀಯದಲ್ಲಿ ಪ್ರಭಾವಿ ನಾಯಕ ಡಿಸಿಎಂ ಡಿ ಕೆ ಶಿವಕುಮಾರ್ ರಾತ್ರೋರಾತ್ರಿ ಜೆಡಿಎಸ್ ನಾಯಕರಿಗೆ ಬಿಗ್ಶಾಕ್ಕೊಟ್ಟಿದ್ದಾರೆ.
ಸದ್ದಿಲ್ಲದೆ ಕಳೆದ ರಾತ್ರಿ ಚನ್ನಪಟ್ಟಣದ ಜೆಡಿಎಸ್ ನಾಯಕರಾದ ಅಕ್ಕೂರುದೊಡ್ಡಿ ಶಿವಣ್ಣ ಸೇರಿದಂತೆ ಬರೋಬ್ಬರಿ 400 ಕ್ಕೂ ಮುಖಂಡರನ್ನು ಡಿ ಕೆ ಶಿವಕುಮಾರ್ ಕಾಂಗ್ರೆಸ್ಪಕ್ಷಕ್ಕೆ ಬರಮಾಡಿಕೊಂಡಿದ್ದು, ದಳಪತಿಗಳಿ ಬಿಗ್ಶಾಕ್ನೀಡಿದ್ದಾರೆ.
ಪಕ್ಷದ ಶಾಲು, ಧ್ವಜ ನೀಡಿ ಬರಮಾಡಿಕೊಂಡ ಡಿ ಕೆ ಶಿವಕುಮಾರ್: ಕೆಪಿಸಿಸಿ ಕಚೇರಿಯಲ್ಲಿ ಚನ್ನಪಟ್ಟಣದ ಜೆಡಿಎಸ್ ನಾಯಕರಾದ ಅಕ್ಕೂರುದೊಡ್ಡಿ ಶಿವಣ್ಣ ಸೇರಿದಂತೆ ನಾಯಕರು ಹಾಗೂ ಕಾರ್ಯಕರ್ತರನ್ನು ನಿನ್ನೆ ರಾತ್ರಿ ಕಾಂಗ್ರೆಸ್ ಪಕ್ಷಕ್ಕೆ ಡಿ ಕೆ ಶಿವಕುಮಾರ್ ಪಕ್ಷದ ಶಾಲು ಹೊದಿಸಿ, ಧ್ವಜ ನೀಡಿ ಬರಮಾಡಿಕೊಂಡರು.
ಕಾಂಗ್ರೆಸ್ಗೆ ಸೇರ್ಪಡೆಗೊಂಡ ಜೆಡಿಎಸ್ ಪಕ್ಷದ ಕಾರ್ಯಕರ್ತರು, ನಾಯಕರು ಸೇರಿದಂತೆ 400ಕ್ಕೂ ಹೆಚ್ಚು ಮಂದಿಯನ್ನು ಡಿ ಕೆ ಶಿವಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಬರಮಾಡಿಕೊಂಡರು.
ಚನ್ನಪಟ್ಟಣದವರಿಗೆ ರಾಜಕಾರಣ ಹೊಸದಲ್ಲ. ಆದರೆ ಇಂದು ನಡೆಯುತ್ತಿರುವ ರಾಜಕಾರಣ ನೋಡಿದರೆ ಯಾರನ್ನು ನಂಬಬೇಕು, ಯಾರನ್ನು ಬಿಡಬೇಕು ಎಂದು ಅರ್ಥವಾಗುತ್ತಿಲ್ಲ. ಕುಮಾರಸ್ವಾಮಿ, ಯೋಗೇಶ್ವರ್ ಅವರು ಆಡಿದ್ದ ಮಾತುಗಳು ಒಂದೇ ಎರಡೇ. ಅವರು ಈಗ ಏನಾದರೂ ಮಾಡಿಕೊಳ್ಳಲಿ. ಚನ್ನಪಟ್ಟಣದಲ್ಲಿ ದಳ ಮತ್ತು ಬಿಜೆಪಿ ಒಂದಾಗಲು ಸಾಧ್ಯವೇ ಎಂದು ಡಿ ಕೆ ಶಿವಕುಮಾರ್ಪ್ರಶ್ನಿಸಿದರು.
ಚುನಾವಣೆ ಮುಗಿಯುವ ವೇಳೆಗೆ ಕಾಂಗ್ರೆಸ್ ಅವರಿಗೆ ಏನೂ ಮಾಡದೇ ಇದ್ದರೂ ಪರಸ್ಪರ ಒಬ್ಬರಿಗೊಬ್ಬರು ಯಾವ ಗತಿ ಮಾಡಬೇಕೋ ಮಾಡುತ್ತಾರೆ. ಇವರ ರಾಜಕೀಯ ಸ್ವಾರ್ಥಕ್ಕೆ ಕಾರ್ಯಕರ್ತರು ಏನಾಗಬೇಕು. ಅವರು ಯಾರಿಗಾಗಿ ದುಡಿದರು, ಹೋರಾಟ ಮಾಡಿದರು ಕಳೆದ ಒಂದು ತಿಂಗಳಲ್ಲಿ ಸುಮಾರು ಹತ್ತು ಸಾವಿರ ಕಾರ್ಯಕರ್ತರು ಬಿಜೆಪಿ ಹಾಗೂ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ಹೇಳಿದರು.