i
ಜೆಡಿಎಸ್ ಒಬಿಸಿ ಘಟಕದ ಜಿಲ್ಲಾಧ್ಯಕ್ಷರಾಗಿ ಯೋಗಾನಂದ ಕುಮಾರ್ ನೇಮಕ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲಾ ಜಾತ್ಯತೀತ ಜನತಾದಳದ ಹಿಂದುಳಿದ ವರ್ಗಗಳ ಘಟಕದ ಜಿಲ್ಲಾಧ್ಯಕ್ಷರಾಗಿ ಗುಬ್ಬಿ ತಾಲೂಕಿನ ತ್ಯಾಗ ಟೂರು ಯೋಗಾನಂದ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಅಂಜಿನಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯೋಗಾನಂದ ಕುಮಾರ್ ಅವರ ಪಕ್ಷ ಸಂಘಟನೆ ಮತ್ತು ಅವರ ಪಕ್ಷ ನಿಷ್ಠೆಯನ್ನು ಗುರುತಿಸಿ ತುಮಕೂರು ಜಿಲ್ಲಾ ಜಾತ್ಯತೀತ ಜನತಾದಳದ ಹಿಂದುಳಿದ ವರ್ಗಗಳ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಎಚ್.ಡಿ. ಕುಮಾರಸ್ವಾಮಿ, ರಾಷ್ಟ್ರೀಯ
ಅಧ್ಯಕ್ಷ ಎಚ್ ಡಿ ದೇವೇಗೌಡ ರವರ ಶಿಫಾರಸ್ಸಿನ ಮೇರೆಗೆ ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಯೋಗಾನಂದ ಕುಮಾರ್ ಮಾತನಾಡಿ ಪಕ್ಷ ನನಗೆ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿ ದೊಡ್ಡ ಜವಾಬ್ದಾರಿ ನೀಡಿದೆ ಆದ್ದರಿಂದ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಹಿಂದುಳಿದ ವರ್ಗದ ಘಟಕವನ್ನು ಸದೃಢ ಮಾಡಬೇಕು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮವನ್ನು ಅತ್ಯಂತ ನಿಷ್ಠೆಯಿಂದ ಪ್ರಾಮಾಣಿಕವಾಗಿ ಪಕ್ಷ ಸಂಘಟನೆ ಮಾಡಿ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲಾಗುವುದು ಎಂದು ಹೇಳಿದ್ದಾರೆ.
ನನ್ನ ಆಯ್ಕೆಗೆ ತುರುವೇಕೆರೆ ಶಾಸಕ ಕೃಷ್ಣಪ್ಪ, ಜಯರಾಮಣ್ಣ, ಶಾಸಕರಾದ ಸುರೇಶ್ ಬಾಬು, ಗುಬ್ಬಿ ಜೆಡಿಎಸ್ ಮುಖಂಡರಾದ ನಾಗರಾಜ್, ಮಾಜಿ ಶಾಸಕರಾದ ಸುಧಾಕರ್ ಲಾಲ್, ಜಿಲ್ಲೆಯ ಎಲ್ಲ ಮಾಜಿ ಶಾಸಕರುಗಳಿಗೆ ಪಕ್ಷದ ಎಲ್ಲ ಘಟಕದ ಮಹಿಳಾ ಮುಖಂಡರುಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಪಕ್ಷ ಮತ್ತು ಹಿಂದುಳಿದ ವರ್ಗವನ್ನು ಪ್ರಾಮಾಣಿಕವಾಗಿ ಪಕ್ಷ ಸಂಘಟನೆ ಮಾಡಿ ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಎಲ್ಲಾ ಜನಾಂಗ ಎಲ್ಲಾ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಎಲ್ಲ ತಾಲೂಕ್ ಗಳಲ್ಲಿ ಅಧ್ಯಕ್ಷರನ್ನಾಗಿ ಮಾಡುವುದರ ಮುಖಾಂತರ ಪ್ರಾಮಾಣಿಕವಾಗಿ ಅವರನ್ನು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಸಂಘಟನೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯದ ನಾಯಕರ ತೀರ್ಮಾನದಂತೆ ದೇಶದ ಬಗ್ಗೆ ಅಪಾರ ಕಾಳಜಿಹಿಸಿರುವ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡರ ಮುಂದಾಲೋಚನೆ ಹಾಗೂ ದೇಶದ ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಪ್ರಧಾನಿ ಆದರೆ ದೇಶ ಸದೃಢವಾಗಲಿದೆ ಎಂಬ ಅವರ ಮುಂದಾಲೋಚನೆ ನಿರ್ಣಯದಂತೆ ಮೈತ್ರಿ ಧರ್ಮವನ್ನು ಪಾಲನೆ ಮಾಡುತ್ತೇವೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ವಿ ಸೋಮಣ್ಣ ಅವರ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.