i
ಈಜಾಡಲು ತೆರಳಿದ್ದ ಬಾಲಕ ಹೂಳಿನಲ್ಲಿ ಸಿಲುಕಿ ಸಾವು…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಕೆರೆಯಲ್ಲಿ ಈಜಾಡಲು (ತೆರಳಿದ ಬಾಲಕನೋರ್ವ, ಕೆರೆಯಲ್ಲಿನ ಹೂಳಿನಲ್ಲಿ ಸಿಲುಕಿ ಮೃತಪಟ್ಟ ದಾರುಣ ಘಟನೆ ಭಾನುವಾರ ಶಿವಮೊಗ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ನಡೆದಿದೆ.
ಶಿಕಾರಿಪುರ ತಾಲೂಕು ನಂದೀಹಳ್ಳಿ ಗ್ರಾಮದ ನಿವಾಸಿ ಜೀವನ್ (14) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಕ 8 ನೇ ತರಗತಿ ಅಭ್ಯಾಸ ಮಾಡುತ್ತಿದ್ದು, ಶಾಲೆಗೆ ರಜೆಯಿದ್ದ ಕಾರಣದಿಂದ ಮತ್ತೋಡು ಗ್ರಾಮದಲ್ಲಿರುವ ಚಿಕ್ಕಮ್ಮನ ಮನೆಗೆ ಆಗಮಿಸಿದ್ದ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.