i
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ಮತ್ತು ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ-2024ರ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ (ಕನ್ನಡ & ಇಂಗ್ಲಿಷ್ – 1000 ಪದಗಳಿಗೆ ಮೀರದಂತೆ) ಮತ್ತು ಪದವಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು “ಭೂಮಿ ಮತ್ತು ಮಣ್ಣಿನ ಮೇಲೆ ಹವಾಮಾನ ಬದಲಾವಣೆಯ ” (Impacts of Climate Change on Soil and Land) ಶೀರ್ಷಿಕೆಯಡಿಯಲ್ಲಿ ನಡೆಸಲಾಗುತ್ತಿದ್ದು, ಪ್ರಬಂಧಗಳನ್ನು ಕಳುಹಿಸಲು ಮೇ 27, 2024 ಕಡೆಯ ದಿನಾಂಕವಾಗಿದೆ.
ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವ ವಿದ್ಯಾರ್ಥಿಗಳು (ಇಬ್ಬರು ವಿದ್ಯಾರ್ಥಿಗಳ ಟೀಂ) ಅಕಾಡೆಮಿಯ ಇ-ಮೇಲ್: ksta.gok@gmail.com ಗೆ ಮೇ 27, 2024 ರೊಳಗಾಗಿ ನೊಂದಾಯಿಸಿಕೊಳ್ಳಬಹುದಾಗಿದೆ. ರಸಪ್ರಶ್ನೆ ಸ್ಪರ್ಧೆಯನ್ನು 06ನೇ ಜೂನ್ 2024 ರಂದು ಅಕಾಡೆಮಿಯ ಸಭಾಂಗಣದಲ್ಲಿ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಾಲತಾಣ https://kstacademy.in ವೀಕ್ಷಿಸಬಹುದಾಗಿದೆ ಅಥವಾ ಅಕಾಡೆಮಿಯ ಹಿರಿಯ ವೈಜ್ಞಾನಿಕಾಧಿಕಾರಿ ಡಾ.ಆನಂದ್ ಆರ್, ಮೊ: 9880405181 ಇವರನ್ನು ಸಂಪರ್ಕಿಸುವುದು.
ಈ ಕಾರ್ಯಾಗಾರವನ್ನು ಪ್ರೌಢಶಾಲಾ ಮತ್ತು ಪದವಿ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಅಧಿಕೃತ ಪ್ರಕಟಣೆ ತಿಳಿಸಿದೆ.