i
ಮಣ್ಣಿನ ಆರೋಗ್ಯ ಚೆನ್ನಾಗಿದ್ದರೆ ಮನುಷ್ಯನ ಆರೋಗ್ಯ ಉತ್ತಮವಾಗಿರುತ್ತದೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ವಿದ್ಯಾಲಯ ಶಾಲೆಯ ಮಕ್ಕಳಿಗೆ ಬುಧವಾರ ಮಣ್ಣು ಆರೋಗ್ಯ ಕುರಿತು ತರಬೇತಿ ನೀಡಲಾಯಿತು.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಶಾಲಾ ಮಕ್ಕಳಿಗೆ ಮಣ್ಣು ಆರೋಗ್ಯ ಅಭಿಯಾನ ಕುರಿತು ಕಾರ್ಯಕ್ರಮ ಆಯೋಜಿಸಿದ್ದು, 6ನೇ ತರಗತಿಯಿಂದ 12ನೇ ತರಗತಿವರೆಗಿನ ಮಕ್ಕಳಿಗೆ ಮಣ್ಣು ಆರೋಗ್ಯ ಕುರಿತು ತರಬೇತಿ ನೀಡಲಾಯಿತು.
ತರಬೇತಿ ಕಾರ್ಯಕ್ರಮದಲ್ಲಿ ಯೋಜನೆಯ ಉದ್ದೇಶ, ಮಣ್ಣು ಮಾದರಿ ಸಂಗ್ರಹಣೆ, ವಿಶ್ಲೇಷಣೆ, ಮಣ್ಣು ಆರೋಗ್ಯ ಚೀಟಿ ತಯಾರಿ ಕುರಿತು ಮಾಹಿತಿ ನೀಡಲಾಯಿತು. ಜವಹಾರ್ ವಿದ್ಯಾಲಯ ಶಾಲೆಯ ಒಟ್ಟು 60 ವಿದ್ಯಾರ್ಥಿಗಳು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್, ಉಪ ಕೃಷಿ ನಿರ್ದೇಶಕ ಬಿ.ಎನ್.ಪ್ರಭಾಕರ್, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ರವಿಕುಮಾರ್, ಜವಾಹರ್ ಶಾಲೆಯ ಮುಖ್ಯ ಶಿಕ್ಷಕ ರೆಟನಾಕುಮಾರ್ ಡೇನಿಯಲ್, ಸಹಾಯಕ ಕೃಷಿ ನಿರ್ದೇಶಕಿ ಟಿ.ಪಿ. ರಂಜಿತಾ, ಕೃಷಿ ಅಧಿಕಾರಿ ಪಾರ್ವತಮ್ಮ, ಆತ್ಮ ಸಿಬ್ಬಂದಿ, ಶಾಲೆಯ ಶಿಕ್ಷಕರು ಹಾಗೂ ಇತರರು ಹಾಜರಿದ್ದರು.